ಬ್ರೇಕಿಂಗ್ ನ್ಯೂಸ್
14-11-21 03:41 pm HK News Desk ಕ್ರೈಂ
ಮುಂಬೈ, ನ.14: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಸಿನೆಸ್ ಮ್ಯಾನ್ ಒಬ್ಬರಿಂದ 1.51 ಕೋಟಿ ಹಣವನ್ನು ಪಡೆದು ವಂಚನೆ ನಡೆಸಿದ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿತಿನ್ ಬರಾರಿ ಎಂಬ ಬಿಸಿನೆಸ್ ಮ್ಯಾನ್ ಶನಿವಾರ ಬಾಂದ್ರಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. 2014ರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಎಸ್ಎಫ್ಎಲ್ ಫಿಟ್ನೆಸ್ ಕಂಪನಿಗೆ ಹಣ ಹೂಡಿಕೆ ಮಾಡುವಂತೆ ಅದರ ಡೈರೆಕ್ಟರ್ ಖಾಶಿಫ್ ಖಾನ್, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮನವೊಲಿಕೆ ಮಾಡಿದ್ದರು. ಅದರಂತೆ ಹಣ ಹೂಡಿಕೆ ಮಾಡಿದ್ದು, ಒಪ್ಪಂದ ಪ್ರಕಾರ ಕಂಪನಿಯ ಫ್ರಾಂಚೈಸಿ ನೀಡಬೇಕಾಗಿತ್ತು. ಕಂಪನಿ ಅಡಿಯಲ್ಲೇ ಪುಣೆಯ ಹಡಪ್ಸರ್ ಮತ್ತು ಕೋರೆಗಾಂವ್ ನಲ್ಲಿ ಜಿಮ್ ಮತ್ತು ಸ್ಪಾ ಸೆಂಟರನ್ನು ಆರಂಭಿಸಬೇಕಿತ್ತು. ಆದರೆ ಅದನ್ನು ಮಾಡಿಕೊಡದೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ತನ್ನ ಹಣವನ್ನು ಮರಳಿಸುವಂತೆ ತಿಳಿಸಿದಾಗ, ಬೆದರಿಕೆ ಒಡ್ಡಲಾಗಿತ್ತು ಅನ್ನುವುದನ್ನೂ ದೂರಿನಲ್ಲಿ ಹೇಳಲಾಗಿದೆ. ರಾಜ್ ಕುಂದ್ರಾ ಅವರನ್ನು ಪೋರ್ನೋಗ್ರಫಿ ವಿಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಬಂಧಿಸಿ, ಆನಂತರ ಜಾಮೀನಿನಲ್ಲಿ ಹೊರಬಂದ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪತಿಯ ಈ ರೀತಿಯ ಚಟುವಟಿಕೆ ಬಗ್ಗೆ ತನ್ನ ಅರಿವಿಗೆ ಬಂದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು.
ಶಿಲ್ಪಾ ಶೆಟ್ಟಿ ತನ್ನದೇ ಆದ ಫಿಟ್ನೆಸ್ ಜಿಮ್ ಕಂಪನಿ ಹೊಂದಿದ್ದು, ಯೂಟ್ಯೂಬನ್ನೂ ಹೊಂದಿದ್ದಾರೆ. ಇವರೆಡು ಕೂಡ ಮುಂಬೈನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.
Actor Shilpa Shetty, her husband Raj Kundra and Kaashif Khan, director of SFL Fitness Pvt Ltd, have been booked by the Bandra police on the complaint of a Pune youth who alleged he was cheated of ₹1.51 crores by them.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm