ಬ್ರೇಕಿಂಗ್ ನ್ಯೂಸ್
14-11-21 03:41 pm HK News Desk ಕ್ರೈಂ
ಮುಂಬೈ, ನ.14: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಸಿನೆಸ್ ಮ್ಯಾನ್ ಒಬ್ಬರಿಂದ 1.51 ಕೋಟಿ ಹಣವನ್ನು ಪಡೆದು ವಂಚನೆ ನಡೆಸಿದ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿತಿನ್ ಬರಾರಿ ಎಂಬ ಬಿಸಿನೆಸ್ ಮ್ಯಾನ್ ಶನಿವಾರ ಬಾಂದ್ರಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. 2014ರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಎಸ್ಎಫ್ಎಲ್ ಫಿಟ್ನೆಸ್ ಕಂಪನಿಗೆ ಹಣ ಹೂಡಿಕೆ ಮಾಡುವಂತೆ ಅದರ ಡೈರೆಕ್ಟರ್ ಖಾಶಿಫ್ ಖಾನ್, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮನವೊಲಿಕೆ ಮಾಡಿದ್ದರು. ಅದರಂತೆ ಹಣ ಹೂಡಿಕೆ ಮಾಡಿದ್ದು, ಒಪ್ಪಂದ ಪ್ರಕಾರ ಕಂಪನಿಯ ಫ್ರಾಂಚೈಸಿ ನೀಡಬೇಕಾಗಿತ್ತು. ಕಂಪನಿ ಅಡಿಯಲ್ಲೇ ಪುಣೆಯ ಹಡಪ್ಸರ್ ಮತ್ತು ಕೋರೆಗಾಂವ್ ನಲ್ಲಿ ಜಿಮ್ ಮತ್ತು ಸ್ಪಾ ಸೆಂಟರನ್ನು ಆರಂಭಿಸಬೇಕಿತ್ತು. ಆದರೆ ಅದನ್ನು ಮಾಡಿಕೊಡದೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ತನ್ನ ಹಣವನ್ನು ಮರಳಿಸುವಂತೆ ತಿಳಿಸಿದಾಗ, ಬೆದರಿಕೆ ಒಡ್ಡಲಾಗಿತ್ತು ಅನ್ನುವುದನ್ನೂ ದೂರಿನಲ್ಲಿ ಹೇಳಲಾಗಿದೆ. ರಾಜ್ ಕುಂದ್ರಾ ಅವರನ್ನು ಪೋರ್ನೋಗ್ರಫಿ ವಿಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಬಂಧಿಸಿ, ಆನಂತರ ಜಾಮೀನಿನಲ್ಲಿ ಹೊರಬಂದ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪತಿಯ ಈ ರೀತಿಯ ಚಟುವಟಿಕೆ ಬಗ್ಗೆ ತನ್ನ ಅರಿವಿಗೆ ಬಂದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು.
ಶಿಲ್ಪಾ ಶೆಟ್ಟಿ ತನ್ನದೇ ಆದ ಫಿಟ್ನೆಸ್ ಜಿಮ್ ಕಂಪನಿ ಹೊಂದಿದ್ದು, ಯೂಟ್ಯೂಬನ್ನೂ ಹೊಂದಿದ್ದಾರೆ. ಇವರೆಡು ಕೂಡ ಮುಂಬೈನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.
Actor Shilpa Shetty, her husband Raj Kundra and Kaashif Khan, director of SFL Fitness Pvt Ltd, have been booked by the Bandra police on the complaint of a Pune youth who alleged he was cheated of ₹1.51 crores by them.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am