ಬ್ರೇಕಿಂಗ್ ನ್ಯೂಸ್
14-11-21 03:41 pm HK News Desk ಕ್ರೈಂ
ಮುಂಬೈ, ನ.14: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಸಿನೆಸ್ ಮ್ಯಾನ್ ಒಬ್ಬರಿಂದ 1.51 ಕೋಟಿ ಹಣವನ್ನು ಪಡೆದು ವಂಚನೆ ನಡೆಸಿದ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿತಿನ್ ಬರಾರಿ ಎಂಬ ಬಿಸಿನೆಸ್ ಮ್ಯಾನ್ ಶನಿವಾರ ಬಾಂದ್ರಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. 2014ರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಎಸ್ಎಫ್ಎಲ್ ಫಿಟ್ನೆಸ್ ಕಂಪನಿಗೆ ಹಣ ಹೂಡಿಕೆ ಮಾಡುವಂತೆ ಅದರ ಡೈರೆಕ್ಟರ್ ಖಾಶಿಫ್ ಖಾನ್, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮನವೊಲಿಕೆ ಮಾಡಿದ್ದರು. ಅದರಂತೆ ಹಣ ಹೂಡಿಕೆ ಮಾಡಿದ್ದು, ಒಪ್ಪಂದ ಪ್ರಕಾರ ಕಂಪನಿಯ ಫ್ರಾಂಚೈಸಿ ನೀಡಬೇಕಾಗಿತ್ತು. ಕಂಪನಿ ಅಡಿಯಲ್ಲೇ ಪುಣೆಯ ಹಡಪ್ಸರ್ ಮತ್ತು ಕೋರೆಗಾಂವ್ ನಲ್ಲಿ ಜಿಮ್ ಮತ್ತು ಸ್ಪಾ ಸೆಂಟರನ್ನು ಆರಂಭಿಸಬೇಕಿತ್ತು. ಆದರೆ ಅದನ್ನು ಮಾಡಿಕೊಡದೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ತನ್ನ ಹಣವನ್ನು ಮರಳಿಸುವಂತೆ ತಿಳಿಸಿದಾಗ, ಬೆದರಿಕೆ ಒಡ್ಡಲಾಗಿತ್ತು ಅನ್ನುವುದನ್ನೂ ದೂರಿನಲ್ಲಿ ಹೇಳಲಾಗಿದೆ. ರಾಜ್ ಕುಂದ್ರಾ ಅವರನ್ನು ಪೋರ್ನೋಗ್ರಫಿ ವಿಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಬಂಧಿಸಿ, ಆನಂತರ ಜಾಮೀನಿನಲ್ಲಿ ಹೊರಬಂದ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪತಿಯ ಈ ರೀತಿಯ ಚಟುವಟಿಕೆ ಬಗ್ಗೆ ತನ್ನ ಅರಿವಿಗೆ ಬಂದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು.
ಶಿಲ್ಪಾ ಶೆಟ್ಟಿ ತನ್ನದೇ ಆದ ಫಿಟ್ನೆಸ್ ಜಿಮ್ ಕಂಪನಿ ಹೊಂದಿದ್ದು, ಯೂಟ್ಯೂಬನ್ನೂ ಹೊಂದಿದ್ದಾರೆ. ಇವರೆಡು ಕೂಡ ಮುಂಬೈನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.
Actor Shilpa Shetty, her husband Raj Kundra and Kaashif Khan, director of SFL Fitness Pvt Ltd, have been booked by the Bandra police on the complaint of a Pune youth who alleged he was cheated of ₹1.51 crores by them.
21-03-26 01:22 pm
HK News Staffer
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 01:57 pm
HK News Staffer
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm