ಬ್ರೇಕಿಂಗ್ ನ್ಯೂಸ್
18-11-21 05:15 pm Mangaluru correspondent ಕ್ರೈಂ
ಮಂಗಳೂರು, ನ.18: ನೀರಿನ ಮೀಟರ್ ರೀಡಿಂಗ್ ಮಾಡುವವರು ಎಂದು ಹೇಳಿ ಮನೆಗೆ ಬಂದಿದ್ದ ಇಬ್ಬರು ಮನೆಯಲ್ಲಿದ್ದ ವೃದ್ಧ ಮಹಿಳೆಯನ್ನು ಯಾಮಾರಿಸಿ, ಕಪಾಟಿನಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ಕದ್ದೊಯ್ದ ಘಟನೆ ಉರ್ವಾದಲ್ಲಿ ನಡೆದಿದೆ.
ಉರ್ವಾ ಸ್ಟೋರ್ ಬಳಿಯ ದಡ್ಡಲ್ ಕಾಡ್ ಎಂಬಲ್ಲಿ ಘಟನೆ ನಡೆದಿದೆ. ಮೀರಾ ಪೈ ಎಂಬವರ ಮನೆಗೆ ನ.16ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಬಂದಿದ್ದು ನಾವು ಮಹಾನಗರ ಪಾಲಿಕೆಯಿಂದ ಬಂದಿದ್ದಾಗಿ ಹೇಳಿದ್ದಾರೆ. ನಿಮ್ಮ ನೀರಿನ ಮೀಟರ್ ರೀಡಿಂಗ್ ಮಾಡಬೇಕು, ನೀರಿನ ಸಂಪ್ ಚೆಕ್ ಮಾಡಬೇಕೆಂದು ಹೇಳಿ ಅಧಿಕಾರಿಗಳ ಸೋಗಿನಲ್ಲಿ ಪರಿಶೀಲನೆ ಮಾಡಿದ್ದಾರೆ.
ಆನಂತರ, ಮಹಿಳೆಯ ಜೊತೆಗೆ ಮನೆಯ ಟೆರೇಸಿಗೆ ತೆರಳಿದ್ದ ಇಬ್ಬರು ಅಲ್ಲಿರುವ ನೀರಿನ ಟಾಂಕಿಯನ್ನು ಪರಿಶೀಲನೆ ನಡೆಸಿದ್ದು, ಮನೆ ಹಿಂಭಾಗದಲ್ಲಿ ಗಲೀಜು ಮಾಡದಂತೆ ಹೇಳಿದ್ದಾರೆ. ಈ ವೇಳೆ, ಪರಿಸರದ ನಿವಾಸಿಗಳು ಕೂಡ ಬಂದಿದ್ದು, ನೀವು ಮಹಾನಗರ ಪಾಲಿಕೆಯವರು ಅನ್ನುವುದಕ್ಕೆ ಯಾವ ದಾಖಲೆಯಿದೆ ಎಂದು ಹೇಳಿ ಕೇಳಿದ್ದಾರೆ. ಅದು ಬೈಕಿನಲ್ಲಿದೆ ಎಂದು ಕೊಡುತ್ತೇವೆಂದು ಹೇಳಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದರು.
ಸಂಜೆ ವೇಳೆಗೆ, ಮನೆಯ ಒಳಗಿನ ಕಪಾಟಿನಲ್ಲಿ ಚೆಕ್ ಮಾಡಿದಾಗ, 68 ಗ್ರಾಮ್ ಚಿನ್ನಾಭರಣ ಮತ್ತು 71 ಸಾವಿರ ರೂ. ನಗದು ಹಣ ಕಳವಾಗಿತ್ತು. ಇದರ ಬಗ್ಗೆ 70 ವರ್ಷದ ಮೀರಾ ಪೈ ಉರ್ವಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮೀಟರ್ ರೀಡಿಂಗ್ ಎಂದು ಹೇಳಿ ಇಬ್ಬರು ಅಜ್ಜಿಯ ಜೊತೆಗೆ ಮಾತನಾಡುತ್ತಿದ್ದರೆ, ಇನ್ನೊಬ್ಬ ವ್ಯಕ್ತಿ ಮನೆಯ ಒಳಗೆ ಹೋಗಿದ್ದ ಅನ್ನುವುದನ್ನು ಪತ್ತೆ ಮಾಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
Mangalore Robbery in Urwa store, Burglars enter home loot cash and gold.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm