ಬ್ರೇಕಿಂಗ್ ನ್ಯೂಸ್
20-11-21 10:29 pm Mangaluru Correspondent ಕ್ರೈಂ
ಬಂಟ್ವಾಳ, ನ.20: ರಸ್ತೆಯ ವಿಚಾರದಲ್ಲಿ ಎರಡು ಮನೆಗಳ ಮಧ್ಯೆ ಜಾಗದ ತಕರಾರು ಇದ್ದರೂ, ಮಧ್ಯಪ್ರವೇಶ ಮಾಡಿದ ದಲಿತ ಸಂಘಟನೆಯ ನಾಯಕರು ಮೇಲ್ವರ್ಗದ ಪರವಾಗಿ ವಕಾಲತ್ತು ವಹಿಸಿದ್ದಲ್ಲದೆ ದಲಿತ ಮಹಿಳೆಯನ್ನೇ ಕತ್ತು ಹಿಡಿದು ತಳ್ಳಿ ಹಲ್ಲೆಗೈದ ಘಟನೆ ತಾಲೂಕಿನ ವಾಮದಪದವು ಬಳಿಯ ಬಸ್ತಿಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಬಸ್ತಿಕೋಡಿ ಪಂಚಾಯತಿಗೆ ಒಳಪಟ್ಟ ಕೊಡಂಬೆಟ್ಟಿನ ಆಲೆಪ್ಪಾಡಿ ಎಂಬಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ಶಾಂತ (55) ಎಂಬ ಮಹಿಳೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಲಿತ ಸಮುದಾಯಕ್ಕೆ ಸೇರಿದ ಮಹಿಳೆಯ ಮನೆಯವರಿಗೂ, ನೆರೆಮನೆಯ ನವೀನ್ ಪೂಜಾರಿ ಎಂಬವರ ಮಧ್ಯೆ ಜಾಗದ ತಕರಾರು ಇತ್ತು. ಕಳೆದ ಕೆಲವು ವರ್ಷಗಳಿಂದ ನವೀನ್ ಪೂಜಾರಿ ಮನೆಯವರು ಮಹಿಳೆಯ ಮನೆಯವರಿಗೆ ಸೇರಿದ್ದ ಜಾಗದಲ್ಲಿ ಹೋಗಿ ಬರುತ್ತಿದ್ದರು. ಆದರೆ, ಇತ್ತೀಚೆಗೆ ಸದ್ರಿ ಜಾಗವನ್ನು ಪೋರ್ಜರಿ ದಾಖಲೆ ಸೃಷ್ಟಿಸಿ, ತಮ್ಮ ಹೆಸರಿಗೆ ಮಾಡಿಸಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಮಹಿಳೆಯ ಮನೆಯವರು ಆಕ್ಷೇಪ ತೆಗೆದಿದ್ದರು. ಅಲ್ಲದೆ, ಸ್ಥಳೀಯ ಪಂಚಾಯತ್ ಸೇರಿದಂತೆ ವಿವಿಧ ಕಡೆ ದೂರನ್ನೂ ನೀಡಿದ್ದರು. ಅಲ್ಲದೆ, ನವೀನ್ ಮನೆಯವರು ಹೋಗಿ ಬರುತ್ತಿದ್ದ ಜಾಗಕ್ಕೆ ಅಡ್ಡಲಾಗಿ ಬೇಲಿ ಹಾಕಿದ್ದರು.






ಇದರಿಂದ ಎರಡೂ ಮನೆಯವರಿಗೆ ಜಟಾಪಟಿ ನಡೆದಿತ್ತು. ನ.18ರಂದು ಮಧ್ಯಾಹ್ನ ನವೀನ್ ಮನೆಯವರು ಏಕಾಏಕಿ ಜೆಸಿಬಿ ತಂದು ಬೇಲಿಯನ್ನು ಕಿತ್ತೆಸೆದು ರಸ್ತೆ ಮಾಡಿದ್ದಾರೆ. ಈ ವೇಳೆ, ಜೆಸಿಬಿ ಕಾಮಗಾರಿ ತಡೆಯಲು ಹೋಗಿದ್ದ ಮಹಿಳೆಯ ಮೇಲೆ ದಲಿತ ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಜನಾರ್ದನ ಚೆಂಡ್ತಿಮಾರ್, ಚಂದ್ರಶೇಖರ ಕುಕ್ಕಿಮಾರ್, ಉಮೇಶ್ ಕುಮಾರ್ ಎಂಬವರ ನೇತೃತ್ವದಲ್ಲಿ ದೈಹಿಕ ಹಲ್ಲೆ ನಡೆಸಲಾಗಿದೆ.
ಐದಾರು ಮಂದಿ ಏಕಾಏಕಿ ದಾಳಿ ನಡೆಸಿದ್ದರಿಂದ ಆಘಾತಕ್ಕೆ ಒಳಗಾದ ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಬಳಿಕ ವಾಮದಪದವು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರಿಂದ ಆಕೆಯ ಮಕ್ಕಳು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಹಲ್ಲೆ ಯತ್ನ ಕೇಸು ದಾಖಲಿಸಿ ಆರೋಪಿಗಳ ಪರ ನಿಂತಿದ್ದಾರೆಂದು ದೂರಲಾಗಿದೆ. ಜಾಗದಲ್ಲಿ ಬೆಳೆಸಿದ್ದ ಬಾಳೆ ಇನ್ನಿತರ ಕೃಷಿಯನ್ನು ಕಿತ್ತುಹಾಕಿ, ಅಲ್ಲಿ ರಸ್ತೆ ಮಾಡಲಾಗಿದೆ. ಅಲ್ಲದೆ, ದಲಿತ ಸಂಘಟನೆ ಎಂದು ಹೇಳಿಕೊಂಡು ತಿರುಗಾಡುವ ಮಂದಿಯೇ ಎದುರು ಮನೆಯ ನವೀನ್ ಪೂಜಾರಿ ಜೊತೆ ಸೇರಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಹಿಳೆಯ ಪುತ್ರ ನವೀನ್ ಆರೋಪಿಸಿದ್ದಾರೆ.
Bantwa, Vamadapadavu Dalit Woman assaulted by Dalit community members and goons over a property dispute, woman hospitalised.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm