ಬ್ರೇಕಿಂಗ್ ನ್ಯೂಸ್
21-11-21 04:02 pm HK News Desk ಕ್ರೈಂ
ಯಾದಗಿರಿ, ನ.21: ದೇವರ ಪ್ರಸಾದ ಎಂದು ಹೇಳಿ ಪತಿಗೆ ನೀರಿನಲ್ಲಿ ನಿದ್ದೆ ಮಾತ್ರೆ ಕೊಟ್ಟು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲ್ಲಲು ಯತ್ನಿಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಪತಿ ನಿದ್ದೆಗೆ ಜಾರಿದಾಗ, ಕೂಡಲೇ ಪ್ರಿಯತಮನನ್ನು ಮನೆಗೆ ಕರೆಸಿಕೊಂಡು ಇಬ್ಬರೂ ಸೇರಿ ಪತಿರಾಯನ ಮುಖಕ್ಕೆ ತಲೆದಿಂಬು ಇಟ್ಟು ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾರೆ. ಆದರೆ, ಮುಖಕ್ಕೆ ಬಟ್ಟೆ ಮುತ್ತಿಕೊಳ್ಳುತ್ತಲೇ ಎಚ್ಚೆತ್ತ ಪತಿರಾಯ, ಪತ್ನಿಯ ಸಂಚನ್ನು ವಿಫಲಗೊಳಿಸಿದ್ದಾನೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪತಿ ವಿಶ್ವನಾಥ ರೆಡ್ಡಿ ಪತ್ನಿಯ ಕೊಲೆ ಸಂಚಿನಿಂದ ಪಾರಾಗಿದ್ದಾನೆ.
ಪತ್ನಿ ಚಂದ್ರಕಲಾಗೆ ತನ್ನ ತಂಗಿಯ ಗಂಡ ಬಸನಗೌಡನ ಜೊತೆ ಅಕ್ರಮ ಸಂಬಂಧ ಇತ್ತು. ಈ ಬಗ್ಗೆ ಪತಿಗೆ ತಿಳಿಯದಂತೆ ನೋಡಿಕೊಂಡಿದ್ದ ಚಂದ್ರಕಲಾ, ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಮುಗಿಸಲು ಸಂಚು ಹೂಡಿದ್ದಾಳೆ. ಇತ್ತೀಚೆಗೆ ವಿಶ್ವನಾಥ ರೆಡ್ಡಿ ಉಕ್ಕಿನಾಳ ಗ್ರಾಮದ ಬಸವೇಶ್ವರ ಜಾತ್ರೆಗೆ ತೆರಳಿದ್ದ ವೇಳೆ ಭೇಟಿಯಾಗಿದ್ದ ಬಸನಗೌಡ, ನಿಮ್ಮ ಪುತ್ರನಿಗೆ ಆರಾಮ ಇಲ್ಲ ಎಂದು ತಿಳಿದೆ. ಇದರಲ್ಲಿ ಔಷಧಿ ಇದೆಯೆಂದು ಹೇಳಿ ಒಂದು ಕಟ್ಟನ್ನು ಕೊಟ್ಟಿದ್ದ. ಆದರೆ, ಅದರಲ್ಲಿ ನಿದ್ದೆ ಮಾತ್ರೆಯನ್ನು ಕೊಟ್ಟು ಕಳುಹಿಸಿದ್ದ ಬಸನಗೌಡ, ವಿಶ್ವನಾಥ ರೆಡ್ಡಿಯನ್ನು ಕೊಲೆ ಮಾಡಲು ಪ್ಲಾನ್ ಮಾಡಿದ್ದ.
ಪತ್ನಿ ಚಂದ್ರಕಲಾ ನೀರಿನಲ್ಲಿ ನಿದ್ದೆ ಮಾತ್ರೆ ಬೆರಸಿ, ದೇವರ ಪ್ರಸಾದವೆಂದು ಹೇಳಿ ಪತಿಗೆ ಕುಡಿಸಿದ್ದಳು. ಮೊದಲೇ ಸ್ಕೆಚ್ ಹಾಕಿದಂತೆ, ಬಸನಗೌಡನ ಜೊತೆ ಸೇರಿ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾರೆ. ಆದರೆ ನಡುವೆ ಎಚ್ಚೆತ್ತ ಪತಿ ವಿಶ್ವನಾಥ ರೆಡ್ಡಿ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ಪತ್ನಿಯ ಕಿರಾತಕ ಬುದ್ಧಿಯನ್ನು ಬಯಲು ಮಾಡಿದ್ದಾನೆ. ಆನಂತರ, ವಿಶ್ವನಾಥ ರೆಡ್ಡಿಯ ಕುಟುಂಬಸ್ಥರು ಸೇರಿ ಬಸನಗೌಡನಿಗೆ ಚೆನ್ನಾಗಿ ಥಳಿಸಿದ್ದಾರೆ. ಅಲ್ಲದೆ, ಪೊಲೀಸರಿಗೆ ಹೇಳಿ ಇಬ್ಬರನ್ನೂ ಅವರ ವಶಕ್ಕೆ ಒಪ್ಪಿಸಿದ್ದಾರೆ. ಇಬ್ಬರ ಮೊಬೈಲ್ ಚೆಕ್ ಮಾಡಿದಾಗ, ಬಸನಗೌಡ ಮಾತನಾಡಿದ್ದ ಆಡಿಯೋ ಲಭ್ಯವಾಗಿದ್ದು, ಕೊಲೆಗೆ ಸ್ಕೆಚ್ ಹಾಕಿದ್ದು ಬಯಲಾಗಿದೆ. ಕೆಂಭಾವಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದು, ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
Yadagiri Wife tries to kill Husband by poisoning him to hide the illicit affair.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm