ಬ್ರೇಕಿಂಗ್ ನ್ಯೂಸ್
22-11-21 07:41 pm HK News Desk ಕ್ರೈಂ
ಬೆಂಗಳೂರು, ನ.22 : ‘ಇನ್ಸ್ಟಾಗ್ರಾಮ್' ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಗಿಫ್ಟ್ ಕಳುಹಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 45 ಲಕ್ಷ ರೂ. ಪೀಕಿಸಿಕೊಂಡು ಪಂಗನಾಮ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಮಹಿಳೆ ವೈಟ್ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ವರ್ತೂರು ನಿವಾಸಿ 30 ವರ್ಷದ ಮಹಿಳೆಗೆ ಅಲೆಕ್ಸ್ ಎರಿನ್ ಎಂಬ ಹೆಸರಿನ ವ್ಯಕ್ತಿ ‘ಇನ್ಸ್ಟಾಗ್ರಾಮ್' ನಲ್ಲಿ ಪರಿಚಯವಾಗಿದ್ದ. ತಾನು ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದಾಗಿ ಹೇಳಿಕೊಂಡು ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಇದನ್ನು ನಂಬಿದ್ದ ಮಹಿಳೆ, ಗೆಳೆತನಕ್ಕೆ ಒಪ್ಪಿ ಚಾಟಿಂಗ್ ಆರಂಭಿಸಿದ್ದರು. ಈ ನಡುವೆ ಆರೋಪಿ ತಮ್ಮ ಸ್ನೇಹದ ನೆನಪಿಗಾಗಿ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದ. ಅದಕ್ಕೆ ಮಹಿಳೆ ಸಮ್ಮತಿಸಿದ್ದರು. ಅದರಂತೆ ಸೆ.30ರಂದು ಮಹಿಳೆಗೆ ಕರೆ ಮಾಡಿದ್ದ ಮತ್ತೊಬ್ಬ ವ್ಯಕ್ತಿ, ತಾನು ದಿಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮಗೆ ವಿದೇಶದಿಂದ ಬೆಲೆಬಾಳುವ ಡೈಮಂಡ್ ಉಡುಗೊರೆ ಬಂದಿರುವುದಾಗಿ ಹೇಳಿದ್ದ. ಅದನ್ನು ಸ್ವೀಕರಿಸಲು ಕೆಲವು ಶುಲ್ಕಗಳನ್ನು ಪಾವತಿಸಬೇಕು ಎಂದು ಸೂಚಿಸಿದ್ದು ಶುಲ್ಕ ತುಂಬದಿದ್ದರೆ ಜೈಲು ಶಿಕ್ಷೆಯಾಗುವುದಾಗಿ ಮಹಿಳೆಯನ್ನು ಹೆದರಿಸಿದ್ದ.
ಆರೋಪಿಯ ಮಾತು ನಂಬಿದ ಮಹಿಳೆ, ಆತ ಹೇಳಿದ್ದ ವಿವಿಧ ಬ್ಯಾಂಕ್ಗಳ ಖಾತೆಗಳಿಗೆ ಹಂತ ಹಂತವಾಗಿ 45.31 ಲಕ್ಷ ರೂ. ಪಾವತಿಸಿದ್ದರು. ಆದರೆ ಹಣ ಪಡೆದ ಆರೋಪಿಗಳು ಯಾವುದೇ ಉಡುಗೊರೆ ಕಳುಹಿಸಿಲ್ಲ. ಅಲ್ಲದೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ವಂಚನೆಗೊಳಗಾದ ಮಹಿಳೆ ನೀಡಿರುವ ದೂರಿನಂತೆ ಆರೋಪಿಗಳಾದ ಅಲೆಕ್ಸ್ ಎರಿಕ್, ವೀರ್ ಪಾಲ್, ಬೆನ್ ಹಾಗೂ ಮಥುರಾ ಅನಿವರ್ ಎಂಬವರ ವಿರುದ್ಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Bangalore Woman Cheated of 45 lakhs on Instagram
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm