ಬ್ರೇಕಿಂಗ್ ನ್ಯೂಸ್
22-11-21 07:41 pm HK News Desk ಕ್ರೈಂ
ಬೆಂಗಳೂರು, ನ.22 : ‘ಇನ್ಸ್ಟಾಗ್ರಾಮ್' ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಗಿಫ್ಟ್ ಕಳುಹಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 45 ಲಕ್ಷ ರೂ. ಪೀಕಿಸಿಕೊಂಡು ಪಂಗನಾಮ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಮಹಿಳೆ ವೈಟ್ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ವರ್ತೂರು ನಿವಾಸಿ 30 ವರ್ಷದ ಮಹಿಳೆಗೆ ಅಲೆಕ್ಸ್ ಎರಿನ್ ಎಂಬ ಹೆಸರಿನ ವ್ಯಕ್ತಿ ‘ಇನ್ಸ್ಟಾಗ್ರಾಮ್' ನಲ್ಲಿ ಪರಿಚಯವಾಗಿದ್ದ. ತಾನು ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದಾಗಿ ಹೇಳಿಕೊಂಡು ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಇದನ್ನು ನಂಬಿದ್ದ ಮಹಿಳೆ, ಗೆಳೆತನಕ್ಕೆ ಒಪ್ಪಿ ಚಾಟಿಂಗ್ ಆರಂಭಿಸಿದ್ದರು. ಈ ನಡುವೆ ಆರೋಪಿ ತಮ್ಮ ಸ್ನೇಹದ ನೆನಪಿಗಾಗಿ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದ. ಅದಕ್ಕೆ ಮಹಿಳೆ ಸಮ್ಮತಿಸಿದ್ದರು. ಅದರಂತೆ ಸೆ.30ರಂದು ಮಹಿಳೆಗೆ ಕರೆ ಮಾಡಿದ್ದ ಮತ್ತೊಬ್ಬ ವ್ಯಕ್ತಿ, ತಾನು ದಿಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮಗೆ ವಿದೇಶದಿಂದ ಬೆಲೆಬಾಳುವ ಡೈಮಂಡ್ ಉಡುಗೊರೆ ಬಂದಿರುವುದಾಗಿ ಹೇಳಿದ್ದ. ಅದನ್ನು ಸ್ವೀಕರಿಸಲು ಕೆಲವು ಶುಲ್ಕಗಳನ್ನು ಪಾವತಿಸಬೇಕು ಎಂದು ಸೂಚಿಸಿದ್ದು ಶುಲ್ಕ ತುಂಬದಿದ್ದರೆ ಜೈಲು ಶಿಕ್ಷೆಯಾಗುವುದಾಗಿ ಮಹಿಳೆಯನ್ನು ಹೆದರಿಸಿದ್ದ.
ಆರೋಪಿಯ ಮಾತು ನಂಬಿದ ಮಹಿಳೆ, ಆತ ಹೇಳಿದ್ದ ವಿವಿಧ ಬ್ಯಾಂಕ್ಗಳ ಖಾತೆಗಳಿಗೆ ಹಂತ ಹಂತವಾಗಿ 45.31 ಲಕ್ಷ ರೂ. ಪಾವತಿಸಿದ್ದರು. ಆದರೆ ಹಣ ಪಡೆದ ಆರೋಪಿಗಳು ಯಾವುದೇ ಉಡುಗೊರೆ ಕಳುಹಿಸಿಲ್ಲ. ಅಲ್ಲದೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ವಂಚನೆಗೊಳಗಾದ ಮಹಿಳೆ ನೀಡಿರುವ ದೂರಿನಂತೆ ಆರೋಪಿಗಳಾದ ಅಲೆಕ್ಸ್ ಎರಿಕ್, ವೀರ್ ಪಾಲ್, ಬೆನ್ ಹಾಗೂ ಮಥುರಾ ಅನಿವರ್ ಎಂಬವರ ವಿರುದ್ಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Bangalore Woman Cheated of 45 lakhs on Instagram
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm