ಬ್ರೇಕಿಂಗ್ ನ್ಯೂಸ್
26-11-21 12:19 pm HK news Desk ಕ್ರೈಂ
ಮಂಗಳೂರು, ನ.26: ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಎಂಟು ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ನಾಲ್ಕು ದಿನಕ್ಕೆ ಕಸ್ಟಡಿ ಪಡೆದಿದ್ದಾರೆ.
ಮಧ್ಯಪ್ರದೇಶ ಮೂಲದ ಜಯ್ ಬನ್ ಅಲಿಯಾಸ್ ಜೈಸಿಂಗ್, ಮುಕೇಶ್ ಸಿಂಗ್, ಮುನೀಮ್ ಸಿಂಗ್ ಮತ್ತು ಜಾರ್ಖಂಡ್ ಮೂಲದ ಮನೀಶ್ ತಿರ್ಕೆ ಆರೋಪಿಗಳಾಗಿದ್ದು, ನಾಲ್ವರನ್ನೂ ಪೊಲೀಸರು ಮತ್ತೆ ವಿಚಾರಣೆ ಮುಂದುವರಿಸಿದ್ದಾರೆ. ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿರುವ ಇವರಲ್ಲಿ ಮೂವರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ತಿರ್ಕೆಯನ್ನು ಕರೆಸಿಕೊಂಡು ನ.21ರಂದು ಅದೇ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ದಂಪತಿಯ ಎಂಟು ವರ್ಷದ ಪುತ್ರಿಯನ್ನು ತಮ್ಮ ಕೊಠಡಿಗೆ ಹೊತ್ತೊಯ್ದು ಕೃತ್ಯ ಎಸಗಿದ್ದರು.
ಒಬ್ಬನ ನಂತರ ಇನ್ನೊಬ್ಬನಂತೆ ಅತ್ಯಾಚಾರ ಎಸಗಿದ್ದು, ನೋವಿನಿಂದ ಚೀರಾಡಿದ ಬಾಲಕಿಯನ್ನು ಕೊನೆಗೆ ಕತ್ತು ಹಿಸುಕಿ ಕೊಲೆಗೈದಿದ್ದರು. ಶವವನ್ನು ಅಲ್ಲಿಯೇ ಟೈಲ್ಸ್ ಫ್ಯಾಕ್ಟರಿಯ ಒಳಭಾಗದಿಂದ ಹರಿದು ಹೋಗುತ್ತಿದ್ದ ನೀರಿನ ಚರಂಡಿಗೆ ಎಸೆದು ಹೋಗಿದ್ದರು. ಸಂಜೆಯಾಗುತ್ತಿದ್ದಂತೆ ಶವ ಪತ್ತೆಯಾಗಿದ್ದು ಪೈಶಾಚಿಕ ಕೃತ್ಯದ ಬಗ್ಗೆ ಭಾರೀ ಆಕ್ರೋಶ ಎದ್ದಿತ್ತು. ಪೊಲೀಸರು ಟೈಲ್ಸ್ ಫ್ಯಾಕ್ಟರಿಯಲ್ಲಿ 20 ಮಂದಿ ಉತ್ತರ ಭಾರತೀಯ ಕಾರ್ಮಿಕರನ್ನು ವಶಕ್ಕೆ ಪಡೆದು ಬೆಂಡೆತ್ತಿದ್ದಾರೆ. ಎಸಿಪಿ ರಂಜಿತ್ ಬಂಡಾರು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ತಮ್ಮನ್ನು ಒಪ್ಪಿಕೊಂಡಿದ್ದರು. ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮತ್ತೆ ನಾಲ್ಕು ದಿನಕ್ಕೆ ಕಸ್ಟಡಿ ಪಡೆದುಕೊಂಡಿದ್ದಾರೆ.
ಈ ನಡುವೆ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯ ಕೇಳಿಬಂದಿದೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ಹಲವು ಸಂಘಟನೆಗಳು, ಸಾರ್ವಜನಿಕರು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
Four persons who have been accused of committing the macabre act of raping an eight-year-old girl in turns inside the premises of Raj Tiles Factory at Parari near Ulaibettu in the outskirts of the city and strangiulating her to death and then dumpling her body in a drain were arrested by the city police on November 24. The four have been sent to four-day police custody.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am