ಬ್ರೇಕಿಂಗ್ ನ್ಯೂಸ್
29-11-21 08:14 pm HK Desk news ಕ್ರೈಂ
ಬೆಂಗಳೂರು, ನ.29: ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಪಡೆದು ಅಟ್ಯಾಚ್ ಮಾಡಿಸಿಕೊಂಡು 10 ಕೋಟಿಗೂ ಹೆಚ್ಚು ಮೌಲ್ಯದ 130 ಕಾರುಗಳೊಂದಿಗೆ ವಂಚಕನೊಬ್ಬ ಪರಾರಿಯಾದ ಘಟನೆ ನಡೆದಿದ್ದು ವಂಚನೆಗೆ ಒಳಗಾದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮಿಳುನಾಡು ಮೂಲದ ಶಿವಕುಮಾರ್ ನಾಪತ್ತೆಯಾಗಿರುವ ವಂಚಕನಾಗಿದ್ದು ಬೆಂಗಳೂರಿನ ನಾಗಸಂದ್ರದಲ್ಲಿ ಕಳೆದ ಒಂದು ವರ್ಷದ ಹಿಂದೆ ಆರ್ಎಸ್ ಟ್ರಾವೆಲ್ಸ್ ಹೆಸರಲ್ಲಿ ಏಜನ್ಸಿ ಆರಂಭಿಸಿದ್ದ. ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಕೊಡುತ್ತಿದ್ದು ಇದಕ್ಕಾಗಿ 130ಕ್ಕೂ ಹೆಚ್ಚು ವಿವಿಧ ಮಾದರಿಯ ಕಾರುಗಳನ್ನು ಅಟ್ಯಾಚ್ ಮಾಡಿಸಿಕೊಂಡಿದ್ದ. ಪ್ರತಿ ತಿಂಗಳ 8 ರಂದು ಅಟ್ಯಾಚ್ ಮಾಡಿದ್ದ ಕಾರು ಮಾಲೀಕರ ಅಕೌಂಟಿಗೆ ಬಾಡಿಗೆ ಹಣವನ್ನೂ ಹಾಕುತ್ತಿದ್ದ.
ವ್ಯವಹಾರದಲ್ಲಿ ನಂಬಿಕೆ ಮೂಡಿದ್ದರಿಂದ ಹೆಚ್ಚು ಕಾರುಗಳನ್ನು ಅಟ್ಯಾಚ್ ಮಾಡಲಾಗಿತ್ತು. ಇದರಲ್ಲಿ ಐಷಾರಾಮಿ ಕಾರು ಸೇರಿದಂತೆ ಇನೋವಾ, ಇಟಿಯೋಸ್, ಸ್ವಿಫ್ಟ್ ನಂತಹ ಕಾರುಗಳನ್ನೂ ಬಾಡಿಗೆಗೆ ಬಿಡಲಾಗಿತ್ತು. ಆದ್ರೆ ಈ ತಿಂಗಳು ಹಣ ಹಾಕಿರಲಿಲ್ಲ.
ಕಾರು ಮಾಲೀಕರು ಈ ಬಗ್ಗೆ ವಿಚಾರಿಸಲು ಶಿವಕುಮಾರ್ ಮೊಬೈಲ್ ಗೆ 3-4 ಬಾರಿ ಕರೆ ಮಾಡಿದ್ದರು. ಸ್ವೀಕರಿಸದೇ ಇದ್ದರಿಂದ ಅನುಮಾನಗೊಂಡ ಕಾರು ಮಾಲೀಕರು ಟ್ರಾವೆಲ್ಸ್ ಬಳಿ ಬಂದು ನೋಡಿದಾಗ ಕಚೇರಿಗೆ ಬೀಗ ಹಾಕಲಾಗಿತ್ತು.
ಆನಂತರ, ಒಬ್ಬೊಬ್ಬರೇ ಟ್ರಾವಲ್ಸ್ ಬಳಿ ಬಂದು ವಿಚಾರಿಸಿದಾಗ ಕಳೆದೊಂದು ವಾರದಿಂದ ಟ್ರಾವಲ್ಸ್ ಗೆ ಬೀಗ ಹಾಕಿರುವ ವಿಚಾರ ತಿಳಿದುಬಂದಿತ್ತು. ತಾವು ಮೋಸ ಹೋಗಿರುವುದನ್ನು ಅರಿತು ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಬರೋಬ್ಬರಿ 130ಕ್ಕೂ ಹೆಚ್ಚು ಕಾರುಗಳೊಂದಿಗೆ ಎಸ್ಕೇಪ್ ಆಗಿದ್ದಾನೆ. ಸದ್ಯ ಕಾರುಗಳನ್ನ ಅಟ್ಯಾಚ್ ಮಾಡಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಬಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
Man fless with 130 taxi cars in Banagalore. The worth of 130 cars is said to be more than 10 crores.
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm