ಬ್ರೇಕಿಂಗ್ ನ್ಯೂಸ್
29-11-21 08:14 pm HK Desk news ಕ್ರೈಂ
ಬೆಂಗಳೂರು, ನ.29: ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಪಡೆದು ಅಟ್ಯಾಚ್ ಮಾಡಿಸಿಕೊಂಡು 10 ಕೋಟಿಗೂ ಹೆಚ್ಚು ಮೌಲ್ಯದ 130 ಕಾರುಗಳೊಂದಿಗೆ ವಂಚಕನೊಬ್ಬ ಪರಾರಿಯಾದ ಘಟನೆ ನಡೆದಿದ್ದು ವಂಚನೆಗೆ ಒಳಗಾದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮಿಳುನಾಡು ಮೂಲದ ಶಿವಕುಮಾರ್ ನಾಪತ್ತೆಯಾಗಿರುವ ವಂಚಕನಾಗಿದ್ದು ಬೆಂಗಳೂರಿನ ನಾಗಸಂದ್ರದಲ್ಲಿ ಕಳೆದ ಒಂದು ವರ್ಷದ ಹಿಂದೆ ಆರ್ಎಸ್ ಟ್ರಾವೆಲ್ಸ್ ಹೆಸರಲ್ಲಿ ಏಜನ್ಸಿ ಆರಂಭಿಸಿದ್ದ. ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಕೊಡುತ್ತಿದ್ದು ಇದಕ್ಕಾಗಿ 130ಕ್ಕೂ ಹೆಚ್ಚು ವಿವಿಧ ಮಾದರಿಯ ಕಾರುಗಳನ್ನು ಅಟ್ಯಾಚ್ ಮಾಡಿಸಿಕೊಂಡಿದ್ದ. ಪ್ರತಿ ತಿಂಗಳ 8 ರಂದು ಅಟ್ಯಾಚ್ ಮಾಡಿದ್ದ ಕಾರು ಮಾಲೀಕರ ಅಕೌಂಟಿಗೆ ಬಾಡಿಗೆ ಹಣವನ್ನೂ ಹಾಕುತ್ತಿದ್ದ.
ವ್ಯವಹಾರದಲ್ಲಿ ನಂಬಿಕೆ ಮೂಡಿದ್ದರಿಂದ ಹೆಚ್ಚು ಕಾರುಗಳನ್ನು ಅಟ್ಯಾಚ್ ಮಾಡಲಾಗಿತ್ತು. ಇದರಲ್ಲಿ ಐಷಾರಾಮಿ ಕಾರು ಸೇರಿದಂತೆ ಇನೋವಾ, ಇಟಿಯೋಸ್, ಸ್ವಿಫ್ಟ್ ನಂತಹ ಕಾರುಗಳನ್ನೂ ಬಾಡಿಗೆಗೆ ಬಿಡಲಾಗಿತ್ತು. ಆದ್ರೆ ಈ ತಿಂಗಳು ಹಣ ಹಾಕಿರಲಿಲ್ಲ.

ಕಾರು ಮಾಲೀಕರು ಈ ಬಗ್ಗೆ ವಿಚಾರಿಸಲು ಶಿವಕುಮಾರ್ ಮೊಬೈಲ್ ಗೆ 3-4 ಬಾರಿ ಕರೆ ಮಾಡಿದ್ದರು. ಸ್ವೀಕರಿಸದೇ ಇದ್ದರಿಂದ ಅನುಮಾನಗೊಂಡ ಕಾರು ಮಾಲೀಕರು ಟ್ರಾವೆಲ್ಸ್ ಬಳಿ ಬಂದು ನೋಡಿದಾಗ ಕಚೇರಿಗೆ ಬೀಗ ಹಾಕಲಾಗಿತ್ತು.
ಆನಂತರ, ಒಬ್ಬೊಬ್ಬರೇ ಟ್ರಾವಲ್ಸ್ ಬಳಿ ಬಂದು ವಿಚಾರಿಸಿದಾಗ ಕಳೆದೊಂದು ವಾರದಿಂದ ಟ್ರಾವಲ್ಸ್ ಗೆ ಬೀಗ ಹಾಕಿರುವ ವಿಚಾರ ತಿಳಿದುಬಂದಿತ್ತು. ತಾವು ಮೋಸ ಹೋಗಿರುವುದನ್ನು ಅರಿತು ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಬರೋಬ್ಬರಿ 130ಕ್ಕೂ ಹೆಚ್ಚು ಕಾರುಗಳೊಂದಿಗೆ ಎಸ್ಕೇಪ್ ಆಗಿದ್ದಾನೆ. ಸದ್ಯ ಕಾರುಗಳನ್ನ ಅಟ್ಯಾಚ್ ಮಾಡಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಬಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
Man fless with 130 taxi cars in Banagalore. The worth of 130 cars is said to be more than 10 crores.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm