ಬ್ರೇಕಿಂಗ್ ನ್ಯೂಸ್
29-11-21 08:14 pm HK Desk news ಕ್ರೈಂ
ಬೆಂಗಳೂರು, ನ.29: ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಪಡೆದು ಅಟ್ಯಾಚ್ ಮಾಡಿಸಿಕೊಂಡು 10 ಕೋಟಿಗೂ ಹೆಚ್ಚು ಮೌಲ್ಯದ 130 ಕಾರುಗಳೊಂದಿಗೆ ವಂಚಕನೊಬ್ಬ ಪರಾರಿಯಾದ ಘಟನೆ ನಡೆದಿದ್ದು ವಂಚನೆಗೆ ಒಳಗಾದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮಿಳುನಾಡು ಮೂಲದ ಶಿವಕುಮಾರ್ ನಾಪತ್ತೆಯಾಗಿರುವ ವಂಚಕನಾಗಿದ್ದು ಬೆಂಗಳೂರಿನ ನಾಗಸಂದ್ರದಲ್ಲಿ ಕಳೆದ ಒಂದು ವರ್ಷದ ಹಿಂದೆ ಆರ್ಎಸ್ ಟ್ರಾವೆಲ್ಸ್ ಹೆಸರಲ್ಲಿ ಏಜನ್ಸಿ ಆರಂಭಿಸಿದ್ದ. ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಕೊಡುತ್ತಿದ್ದು ಇದಕ್ಕಾಗಿ 130ಕ್ಕೂ ಹೆಚ್ಚು ವಿವಿಧ ಮಾದರಿಯ ಕಾರುಗಳನ್ನು ಅಟ್ಯಾಚ್ ಮಾಡಿಸಿಕೊಂಡಿದ್ದ. ಪ್ರತಿ ತಿಂಗಳ 8 ರಂದು ಅಟ್ಯಾಚ್ ಮಾಡಿದ್ದ ಕಾರು ಮಾಲೀಕರ ಅಕೌಂಟಿಗೆ ಬಾಡಿಗೆ ಹಣವನ್ನೂ ಹಾಕುತ್ತಿದ್ದ.
ವ್ಯವಹಾರದಲ್ಲಿ ನಂಬಿಕೆ ಮೂಡಿದ್ದರಿಂದ ಹೆಚ್ಚು ಕಾರುಗಳನ್ನು ಅಟ್ಯಾಚ್ ಮಾಡಲಾಗಿತ್ತು. ಇದರಲ್ಲಿ ಐಷಾರಾಮಿ ಕಾರು ಸೇರಿದಂತೆ ಇನೋವಾ, ಇಟಿಯೋಸ್, ಸ್ವಿಫ್ಟ್ ನಂತಹ ಕಾರುಗಳನ್ನೂ ಬಾಡಿಗೆಗೆ ಬಿಡಲಾಗಿತ್ತು. ಆದ್ರೆ ಈ ತಿಂಗಳು ಹಣ ಹಾಕಿರಲಿಲ್ಲ.

ಕಾರು ಮಾಲೀಕರು ಈ ಬಗ್ಗೆ ವಿಚಾರಿಸಲು ಶಿವಕುಮಾರ್ ಮೊಬೈಲ್ ಗೆ 3-4 ಬಾರಿ ಕರೆ ಮಾಡಿದ್ದರು. ಸ್ವೀಕರಿಸದೇ ಇದ್ದರಿಂದ ಅನುಮಾನಗೊಂಡ ಕಾರು ಮಾಲೀಕರು ಟ್ರಾವೆಲ್ಸ್ ಬಳಿ ಬಂದು ನೋಡಿದಾಗ ಕಚೇರಿಗೆ ಬೀಗ ಹಾಕಲಾಗಿತ್ತು.
ಆನಂತರ, ಒಬ್ಬೊಬ್ಬರೇ ಟ್ರಾವಲ್ಸ್ ಬಳಿ ಬಂದು ವಿಚಾರಿಸಿದಾಗ ಕಳೆದೊಂದು ವಾರದಿಂದ ಟ್ರಾವಲ್ಸ್ ಗೆ ಬೀಗ ಹಾಕಿರುವ ವಿಚಾರ ತಿಳಿದುಬಂದಿತ್ತು. ತಾವು ಮೋಸ ಹೋಗಿರುವುದನ್ನು ಅರಿತು ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಬರೋಬ್ಬರಿ 130ಕ್ಕೂ ಹೆಚ್ಚು ಕಾರುಗಳೊಂದಿಗೆ ಎಸ್ಕೇಪ್ ಆಗಿದ್ದಾನೆ. ಸದ್ಯ ಕಾರುಗಳನ್ನ ಅಟ್ಯಾಚ್ ಮಾಡಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಬಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
Man fless with 130 taxi cars in Banagalore. The worth of 130 cars is said to be more than 10 crores.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm