ಬ್ರೇಕಿಂಗ್ ನ್ಯೂಸ್
29-11-21 08:14 pm HK Desk news ಕ್ರೈಂ
ಬೆಂಗಳೂರು, ನ.29: ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಪಡೆದು ಅಟ್ಯಾಚ್ ಮಾಡಿಸಿಕೊಂಡು 10 ಕೋಟಿಗೂ ಹೆಚ್ಚು ಮೌಲ್ಯದ 130 ಕಾರುಗಳೊಂದಿಗೆ ವಂಚಕನೊಬ್ಬ ಪರಾರಿಯಾದ ಘಟನೆ ನಡೆದಿದ್ದು ವಂಚನೆಗೆ ಒಳಗಾದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮಿಳುನಾಡು ಮೂಲದ ಶಿವಕುಮಾರ್ ನಾಪತ್ತೆಯಾಗಿರುವ ವಂಚಕನಾಗಿದ್ದು ಬೆಂಗಳೂರಿನ ನಾಗಸಂದ್ರದಲ್ಲಿ ಕಳೆದ ಒಂದು ವರ್ಷದ ಹಿಂದೆ ಆರ್ಎಸ್ ಟ್ರಾವೆಲ್ಸ್ ಹೆಸರಲ್ಲಿ ಏಜನ್ಸಿ ಆರಂಭಿಸಿದ್ದ. ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಕೊಡುತ್ತಿದ್ದು ಇದಕ್ಕಾಗಿ 130ಕ್ಕೂ ಹೆಚ್ಚು ವಿವಿಧ ಮಾದರಿಯ ಕಾರುಗಳನ್ನು ಅಟ್ಯಾಚ್ ಮಾಡಿಸಿಕೊಂಡಿದ್ದ. ಪ್ರತಿ ತಿಂಗಳ 8 ರಂದು ಅಟ್ಯಾಚ್ ಮಾಡಿದ್ದ ಕಾರು ಮಾಲೀಕರ ಅಕೌಂಟಿಗೆ ಬಾಡಿಗೆ ಹಣವನ್ನೂ ಹಾಕುತ್ತಿದ್ದ.
ವ್ಯವಹಾರದಲ್ಲಿ ನಂಬಿಕೆ ಮೂಡಿದ್ದರಿಂದ ಹೆಚ್ಚು ಕಾರುಗಳನ್ನು ಅಟ್ಯಾಚ್ ಮಾಡಲಾಗಿತ್ತು. ಇದರಲ್ಲಿ ಐಷಾರಾಮಿ ಕಾರು ಸೇರಿದಂತೆ ಇನೋವಾ, ಇಟಿಯೋಸ್, ಸ್ವಿಫ್ಟ್ ನಂತಹ ಕಾರುಗಳನ್ನೂ ಬಾಡಿಗೆಗೆ ಬಿಡಲಾಗಿತ್ತು. ಆದ್ರೆ ಈ ತಿಂಗಳು ಹಣ ಹಾಕಿರಲಿಲ್ಲ.

ಕಾರು ಮಾಲೀಕರು ಈ ಬಗ್ಗೆ ವಿಚಾರಿಸಲು ಶಿವಕುಮಾರ್ ಮೊಬೈಲ್ ಗೆ 3-4 ಬಾರಿ ಕರೆ ಮಾಡಿದ್ದರು. ಸ್ವೀಕರಿಸದೇ ಇದ್ದರಿಂದ ಅನುಮಾನಗೊಂಡ ಕಾರು ಮಾಲೀಕರು ಟ್ರಾವೆಲ್ಸ್ ಬಳಿ ಬಂದು ನೋಡಿದಾಗ ಕಚೇರಿಗೆ ಬೀಗ ಹಾಕಲಾಗಿತ್ತು.
ಆನಂತರ, ಒಬ್ಬೊಬ್ಬರೇ ಟ್ರಾವಲ್ಸ್ ಬಳಿ ಬಂದು ವಿಚಾರಿಸಿದಾಗ ಕಳೆದೊಂದು ವಾರದಿಂದ ಟ್ರಾವಲ್ಸ್ ಗೆ ಬೀಗ ಹಾಕಿರುವ ವಿಚಾರ ತಿಳಿದುಬಂದಿತ್ತು. ತಾವು ಮೋಸ ಹೋಗಿರುವುದನ್ನು ಅರಿತು ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಬರೋಬ್ಬರಿ 130ಕ್ಕೂ ಹೆಚ್ಚು ಕಾರುಗಳೊಂದಿಗೆ ಎಸ್ಕೇಪ್ ಆಗಿದ್ದಾನೆ. ಸದ್ಯ ಕಾರುಗಳನ್ನ ಅಟ್ಯಾಚ್ ಮಾಡಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಬಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
Man fless with 130 taxi cars in Banagalore. The worth of 130 cars is said to be more than 10 crores.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm