ಬ್ರೇಕಿಂಗ್ ನ್ಯೂಸ್
29-11-21 10:54 pm Mangaluru Correspondent ಕ್ರೈಂ
ಮಂಗಳೂರು, ನ.29: ಸುರತ್ಕಲ್ ಬಳಿಯ ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಸಿಬಂದಿಯೊಬ್ಬ ರೌಡಿಸಂ ತೋರಿಸಿದ್ದು, ಕಾರು ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಕೈಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಬಗ್ಗೆ ಸೀಮಾ ರಂಜಿತ್ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಟೋಲ್ ಗೇಟ್ ನಲ್ಲಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೀಮಾ ರಂಜಿತ್ ಶೆಟ್ಟಿ ದಂಪತಿ ಮಂಗಳೂರಿನಿಂದ ಕಾರಿನಲ್ಲಿ ಉಡುಪಿಗೆ ತೆರಳಿ, ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಬರುತ್ತಿದ್ದಾಗ ಎಡಬದಿಯ ರಸ್ತೆಯಿಂದ ಸಾಗಿದಾಗ, ಟೋಲ್ ಗೇಟ್ ನಲ್ಲಿದ್ದ ಯೋಗೀಶ್ ಎಂಬಾತ ಅವಾಚ್ಯವಾಗಿ ಬೈದು ನಿಂದಿಸಿದ್ದಲ್ಲದೆ, ಚಾಲಕನ ಮೇಲೆ ಕೈಮಾಡಲು ಯತ್ನಿಸಿದ್ದಾನೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಇಟ್ಟು ಮಧ್ಯದ ಟೋಲ್ ಗೇಟ್ ರಸ್ತೆಯಲ್ಲಿ ಚಲಾಯಿಸುವಂತೆ ಬಲವಂತ ಮಾಡಿದ್ದಾನೆ.
ಈ ಬಗ್ಗೆ ಕೂಡಲೇ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದು, ಅಲ್ಲಿಂದ ನಾವು ಈಗ ಲಭ್ಯರಿಲ್ಲ ಎಂದು ಉತ್ತರಿಸಿದ್ದರು ಎನ್ನಲಾಗಿದೆ. ಆನಂತರ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ನಂಬರಿಗೆ ಕರೆ ಮಾಡಿದ್ದು, ಕೂಡಲೇ ಕಮಿಷನರ್ ಸ್ಪಂದಿಸಿದ್ದಾರೆ. ಅಲ್ಲದೆ ಸುರತ್ಕಲ್ ಪೊಲೀಸರನ್ನು ಅಲ್ಲಿಗೆ ಕಳಿಸಿಕೊಟ್ಟು ಆರೋಪಿಯನ್ನು ಬಂಧಿಸುವಂತೆ ಮಾಡಿದ್ದಾರೆ. ಪೊಲೀಸರು ಆರೋಪಿ ಯೋಗೀಶ್ ನನ್ನು ಬಂಧಿಸಿದ್ದಾರೆ. ತನ್ನ ಮೇಲೆ ಕೈಮಾಡಿ ಮಾನಹಾನಿಗೆ ಯತ್ನಿಸಿದ್ದಾಗಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಹಿಂದಿನಿಂದಲೂ ರೌಡಿಗಳನ್ನು ಇಟ್ಟುಕೊಂಡು ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಅಲ್ಲದೆ, ನಿಗದಿಗಿಂತ ಹೆಚ್ಚುವರಿಯಾಗಿ ಶುಲ್ಕವನ್ನು ತೆಗೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಈ ಬಗ್ಗೆ ಹಲವಾರು ಮಂದಿ ದೂರಿದ್ದಾರೆ.
One person was arrested for abusing and attempting to assault a married couple at Surathkal toll gate. The incident took place on November 27. The arrested is identified as Yogesh (23) from Tadambail.
21-03-26 05:32 pm
HK News Staffer
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 03:22 pm
HK News Staffer
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm