ಬ್ರೇಕಿಂಗ್ ನ್ಯೂಸ್
30-11-21 02:28 pm HK Desk news ಕ್ರೈಂ
ಬೆಂಗಳೂರು, ನ.30: ಓಮಿಕ್ರಾನ್ ರೂಪಾಂತರಿ ವೈರಸ್ ಬರದಂತೆ ಲಸಿಕೆ ನೀಡಲು ಬಂದಿರುವುದಾಗಿ ವೈದ್ಯರ ಸೋಗಿನಲ್ಲಿ ಬಂದಿದ್ದ ತಂಡವೊಂದು ಮನೆಯವರಿಗೆ ಪಿಸ್ತೂಲ್ ತೋರಿಸಿ ದರೋಡೆ ನಡೆಸಿರುವ ಘಟನೆ ಯಶವಂತಪುರದ ಎಸ್ ಬಿಎಂ ಕಾಲನಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಒಂದು ಕಾರು ಮತ್ತು ಇನ್ನೊಂದು ಬೈಕಿನಲ್ಲಿ ನಾಲ್ವರು ಬಂದಿದ್ದರು. ಉತ್ತರ ಭಾರತ ಮೂಲದ ಸಂಪತ್ ಸಿಂಗ್ ಎಂಬವರ ಮನೆಗೆ ಬಂದಿದ್ದ ತಂಡ, ನಿಮಗೆ ಕೊರೊನಾ ಲಸಿಕೆ ಆಗಿದೆಯೇ ಎಂದು ಕೇಳಿದ್ದಾರೆ. ಲಸಿಕೆ ತಗೊಂಡಿದ್ದೇವೆ ಎಂದಿದ್ದಕ್ಕೆ ಈಗ, ಹೊಸ ವೈರಸ್ ಬಂದಿರುವುದಕ್ಕೆ ಮತ್ತೊಂದು ಲಸಿಕೆ ನೀಡಲು ಬಂದಿದ್ದೇವೆ ಎಂದು ಹೇಳಿ ಮನೆಯ ಒಳಗೆ ಬಂದಿದ್ದಾರೆ.
ಮನೆಯಲ್ಲಿ ಸಂಪತ್ ಸಿಂಗ್ ಪತ್ನಿ ಪಿಸ್ತಾ ದೇವಿ ಮತ್ತು ಸೊಸೆ ರಕ್ಷಾ ಮಾತ್ರ ಇದ್ದರು. ಪಿಸ್ತಾ ದೇವಿ ಗಂಡನಿಗೆ ಕರೆ ಮಾಡಲೆಂದು ಮೊಬೈಲ್ ತೆಗೆಯುವಷ್ಟರಲ್ಲಿ ಅವರಲ್ಲಿ ಒಬ್ಬಾತ ಆಕೆಯ ಹಣೆಗೆ ರಿವಾಲ್ವರ್ ಇಟ್ಟಿದ್ದಾನೆ. ಕೂಡಲೇ ಅವರಿಬ್ಬರನ್ನೂ ಮನೆಯ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ಬಳಿಕ ಮನೆಯ ಕಪಾಟಿನಲ್ಲಿದ್ದ 50 ಗ್ರಾಮ್ ಚಿನ್ನವನ್ನು ಲೂಟಿ ಮಾಡಿದ್ದಾರೆ. ಇದೇ ವೇಳೆ, ಪಿಸ್ತಾ ದೇವಿಯವರ ಇನ್ನೊಬ್ಬ ಮಗ ವಿಕ್ರಂ ಸಿಂಗ್ ಎಂಬಾತ ಈ ವಿಚಾರ ತಿಳಿಯದೆ ನೇರವಾಗಿ ಮನೆಗೆ ಬಂದಿದ್ದಾನೆ.
ಮನೆಯಲ್ಲಿ ನೋಡಿದರೆ, ನಾಲ್ಕು ಮಂದಿ ವೈದ್ಯರ ಸೋಗಿನಲ್ಲಿದ್ದರು. ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿದ್ದವರು, ನಿನಗೆ ಲಸಿಕೆ ಆಗಿದೆಯಾ ಎಂದು ಕೇಳಿದ್ದಾರೆ. ನನಗೆ ಲಸಿಕೆ ಆಗಿದೆ ಎನ್ನುತ್ತಲೇ ತಾಯಿಯನ್ನು ಕರೆಯುತ್ತಾ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಷ್ಟರಲ್ಲಿ ಆಗಂತುಕರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.
Burglars come as Doctors stating to give Omicron Virus vaccine, show guns and flee with costly items. A case has been registered at Yeshwantpur Police Station.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm