ಬ್ರೇಕಿಂಗ್ ನ್ಯೂಸ್
30-11-21 06:11 pm HK Desk news ಕ್ರೈಂ
ಬೆಂಗಳೂರು, ನ.30: ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮಾದಕ ವಸ್ತು ಪತ್ತೆಮಾಡಿ ವಶಪಡಿಸಿಕೊಂಡಿದ್ದಾರೆ.
ಕಾರಾಗೃಹದಲ್ಲಿದ್ದುಕೊಂಡೇ ರೌಡಿಗಳು,ಖೈದಿಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಾರೆ. ಕಾರಾಗೃಹ ಅಕ್ರಮಗಳ ಅಡ್ಡೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಕಾನೂನು ಬಾಹಿರ ವ್ಯವಹಾರಗಳು ನಡೆಯುತ್ತಿವೆ ಎಂಬ ಮಾಹಿತಿ ಮೇರೆಗೆ ಈ ದಾಳಿ ಮಾಡಲಾಗಿದೆ.
ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಕಾರಾಗೃಹದ ಕೆಲವು ಬ್ಯಾರಕ್ ಗಳಲ್ಲಿ ಗಾಂಜಾ ಪ್ಯಾಕೇಟ್ಗಳು, ಗಾಂಜಾ ಸೇದುವ ಪೈಪ್ಗಳು ಪತ್ತೆಯಾಗಿವೆ. ಹೀಗಾಗಿ ಕಾರಾಗೃಹದ ಮೂಲೆ ಮೂಲೆಯಲ್ಲಿಯೂ ಶೋಧ ನಡೆಸಿದ್ದಾರೆ. ಸಿಸಿಬಿ ಪೋಲೀಸರು ಮತ್ತು ಕಾರಾಗೃಹದ ಅಧಿಕಾರಿಗಳು ಇಂದು ಬೆಳಿಗ್ಗೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ರೌಡಿಗಳು ಜೈಲಿನಲ್ಲಿದ್ದು ಕೊಂಡೇ ತಮ್ಮ ಸಹಚರರ ಮೂಲಕ ನಗರದಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ , ಬೆದರಿಕೆ, ಹಫ್ತಾ ವಸೂಲಿ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಸಿಸಿಬಿ ಪೋಲಿಸರು ಈ ದಾಳಿ ನಡೆಸುವ ಮೂಲಕ ರೌಡಿಗಳಿಗೆ , ಖೈದಿಗಳ ಹಾಗೂ ವಿಚಾರಾಣಾೀನ ಖೈದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರಾಗೃಹದಲ್ಲಿ ನಡೆಯುವ ಅಕ್ರಮ ಚಟುವಟಿಕೆ ನಿಯಂತ್ರಿಸಲು ಈ ದಾಳಿ ನಡೆದಿದೆ. ಆಗಾಗ್ಗೆ ಈ ರೀತಿಯ ದಾಳಿ ನಡೆಯುತ್ತಿದ್ದು ,ಕೆಲವು ಖೈದಿಗಳು, ರೌಡಿಗಳು ಹಾಗೂ ವಿಚಾರಣಾೀನ ಖೈದಿಗಳ ಮೇಲೆ ಜೈಲು ಅಧಿಕಾರಿಗಳು ನಿಗಾ ಇಟ್ಟಿರುತ್ತಾರೆ ಎಂದು ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.
ಅಪರಾಧ ವಿಭಾಗದ ಜಂಟಿ ಪೋಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು ಮೂವರು ಎಸಿಪಿ ಮತ್ತು 15 ಮಂದಿ ಇನ್ಸ್ಪೆಕ್ಟ್ರ್ಗಳು ಕಾರಾಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ಬ್ಯಾರಕ್ಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಗೆ ಸಿಸಿಬಿ ಪೋಲೀಸರು ದೂರು ನೀಡಿದ್ದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Ccb police raid on Bangalore Central jail after inmates involved in criminal activities operating from the jail. The raid was based on information received.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm