ಬ್ರೇಕಿಂಗ್ ನ್ಯೂಸ್
30-11-21 06:11 pm HK Desk news ಕ್ರೈಂ
ಬೆಂಗಳೂರು, ನ.30: ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮಾದಕ ವಸ್ತು ಪತ್ತೆಮಾಡಿ ವಶಪಡಿಸಿಕೊಂಡಿದ್ದಾರೆ.
ಕಾರಾಗೃಹದಲ್ಲಿದ್ದುಕೊಂಡೇ ರೌಡಿಗಳು,ಖೈದಿಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಾರೆ. ಕಾರಾಗೃಹ ಅಕ್ರಮಗಳ ಅಡ್ಡೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಕಾನೂನು ಬಾಹಿರ ವ್ಯವಹಾರಗಳು ನಡೆಯುತ್ತಿವೆ ಎಂಬ ಮಾಹಿತಿ ಮೇರೆಗೆ ಈ ದಾಳಿ ಮಾಡಲಾಗಿದೆ.
ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಕಾರಾಗೃಹದ ಕೆಲವು ಬ್ಯಾರಕ್ ಗಳಲ್ಲಿ ಗಾಂಜಾ ಪ್ಯಾಕೇಟ್ಗಳು, ಗಾಂಜಾ ಸೇದುವ ಪೈಪ್ಗಳು ಪತ್ತೆಯಾಗಿವೆ. ಹೀಗಾಗಿ ಕಾರಾಗೃಹದ ಮೂಲೆ ಮೂಲೆಯಲ್ಲಿಯೂ ಶೋಧ ನಡೆಸಿದ್ದಾರೆ. ಸಿಸಿಬಿ ಪೋಲೀಸರು ಮತ್ತು ಕಾರಾಗೃಹದ ಅಧಿಕಾರಿಗಳು ಇಂದು ಬೆಳಿಗ್ಗೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ರೌಡಿಗಳು ಜೈಲಿನಲ್ಲಿದ್ದು ಕೊಂಡೇ ತಮ್ಮ ಸಹಚರರ ಮೂಲಕ ನಗರದಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ , ಬೆದರಿಕೆ, ಹಫ್ತಾ ವಸೂಲಿ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಸಿಸಿಬಿ ಪೋಲಿಸರು ಈ ದಾಳಿ ನಡೆಸುವ ಮೂಲಕ ರೌಡಿಗಳಿಗೆ , ಖೈದಿಗಳ ಹಾಗೂ ವಿಚಾರಾಣಾೀನ ಖೈದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರಾಗೃಹದಲ್ಲಿ ನಡೆಯುವ ಅಕ್ರಮ ಚಟುವಟಿಕೆ ನಿಯಂತ್ರಿಸಲು ಈ ದಾಳಿ ನಡೆದಿದೆ. ಆಗಾಗ್ಗೆ ಈ ರೀತಿಯ ದಾಳಿ ನಡೆಯುತ್ತಿದ್ದು ,ಕೆಲವು ಖೈದಿಗಳು, ರೌಡಿಗಳು ಹಾಗೂ ವಿಚಾರಣಾೀನ ಖೈದಿಗಳ ಮೇಲೆ ಜೈಲು ಅಧಿಕಾರಿಗಳು ನಿಗಾ ಇಟ್ಟಿರುತ್ತಾರೆ ಎಂದು ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.
ಅಪರಾಧ ವಿಭಾಗದ ಜಂಟಿ ಪೋಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು ಮೂವರು ಎಸಿಪಿ ಮತ್ತು 15 ಮಂದಿ ಇನ್ಸ್ಪೆಕ್ಟ್ರ್ಗಳು ಕಾರಾಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ಬ್ಯಾರಕ್ಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಗೆ ಸಿಸಿಬಿ ಪೋಲೀಸರು ದೂರು ನೀಡಿದ್ದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Ccb police raid on Bangalore Central jail after inmates involved in criminal activities operating from the jail. The raid was based on information received.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm