ಬ್ರೇಕಿಂಗ್ ನ್ಯೂಸ್
30-11-21 06:47 pm HK Desk news ಕ್ರೈಂ
ಹಾಸನ, ನ.30: ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಕೆ.ಗೋಪಾಲಯ್ಯ ಸಮ್ಮುಖದಲ್ಲಿಯೇ ಬಿಜೆಪಿ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಲವು ಕಾರ್ಯಕರ್ತರು ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ, ಮಾಜಿ ಸಿಎಂ ಯಡಿಯೂರಪ್ಪ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅರಸೀಕೆರೆಯ ಮೂಲ ಬಿಜೆಪಿ ಕಾರ್ಯಕರ್ತರ ಮೇಲೆ ಎನ್.ಆರ್ ಸಂತೋಷ್ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರಂಗನಾಥ್ ಎಂಬವರು ಆರೋಪ ಮಾಡಿದ್ದಾರೆ.
ಈ ಮಾತು ಕೇಳಿ ವಿಚಲಿತರಾದ ಎನ್.ಆರ್.ಸಂತೋಷ್ ಬೆಂಬಲಿಗರು, ಸಚಿವರ ಎದುರಲ್ಲೇ ರಂಗನಾಥ್ ಜೊತೆಗಿದ್ದ ಮೋಹನ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ಸಚಿವ ಕೆ.ಗೋಪಾಲಯ್ಯ, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೇಶ್ ಎದುರೇ ಹಲ್ಲೆ ನಡೆಸಿದ್ದಾರೆ.
ಎನ್.ಆರ್.ಸಂತೋಷ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದು ಪ್ರಭಾವಿ ನಾಯಕರಾಗಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸಂತೋಷ್ ಅನುಪಸ್ಥಿತಿಯಲ್ಲಿ ಬೆಂಬಲಿಗ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
Bjp members assault each during election camping in Hassan Santosh supporters assault Gopalya supporters. The fight erupted due some internal issues.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm