ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
21-03-26 05:32 pm
HK News Staffer
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 03:22 pm
HK News Staffer
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm