ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm