ಬ್ರೇಕಿಂಗ್ ನ್ಯೂಸ್
02-12-21 12:20 pm HK Desk news ಕ್ರೈಂ
ಕುಂದಾಪುರ, ಡಿ.2: ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಖರೀದಿ ಸೋಗಿನಲ್ಲಿ ಬಂದಿದ್ದ ಇಬ್ಬರು ಮಹಿಳೆ ಸಹಿತ ಮೂವರು ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಎಗರಿಸಿರುವ ಘಟನೆ ನಡೆದಿದೆ.
ಕೋಟೇಶ್ವರದ ಯುವಿಎ ಮೆರೀಡಿಯನ್ ಹಾಲ್ ನಲ್ಲಿ ಮಂಗಳೂರು ಮೂಲದ ಓರಾ ಫೈನ್ ಜುವೆಲ್ಲರಿ ಲಿಮಿಟೆಡ್ ವತಿಯಿಂದ ಚಿನ್ನ ಮತ್ತು ವಜ್ರದ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲಾಗಿತ್ತು. ನ.27ರಿಂದ 29ರ ವರೆಗೆ ಮೂರು ದಿನಗಳ ಕಾಲ ಮೇಳ ನಡೆದಿತ್ತು. ಪ್ರದರ್ಶನ ಮುಗಿದ ಬಳಿಕ ಸಿಬಂದಿ ಒಟ್ಟು ಚಿನ್ನಾಭರಣ ಸಂಗ್ರಹದ ಬಗ್ಗೆ ತಪಾಸಣೆ ನಡೆಸಿದ್ದಾರೆ. ಈ ವೇಳೆ, 43 ಗ್ರಾಮ್ ತೂಕದ ಎರಡು ಬಂಗಾರದ ಬಳೆಗಳು ನಾಪತ್ತೆಯಾಗಿದ್ದು ಕಂಡುಬಂದಿದೆ.
ಸಿಸಿಟಿವಿ ಪರಿಶೀಲನೆ ನಡೆಸಿದಾಗ ಇಬ್ಬರು ಮಹಿಳೆಯರು ಮತ್ತು ಒಬ್ಬ ಯುವಕ ನ.29ರಂದು ಮಧ್ಯಾಹ್ನ ಬಂದಿದ್ದು, ಅವರು ಚಿನ್ನದ ಎರಡು ಬಳೆಗಳನ್ನು ತೆಗೆದು ತಮ್ಮ ಬ್ಯಾಗಿಗೆ ಹಾಕಿದ್ದು ಕಂಡುಬಂದಿದೆ. 43 ಗ್ರಾಮ್ ಚಿನ್ನದ ಎರಡು ಬಳೆಗಳ ಮೌಲ್ಯ 2.86 ಲಕ್ಷ ಮೌಲ್ಯದ್ದೆಂದು ಸಿಬಂದಿ ತಿಳಿಸಿದ್ದಾರೆ.
ಆಗಂತುಕರು ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದು, ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಓರಾ ಜುವೆಲ್ಲರಿ ಮ್ಯಾನೇಜರ್ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Kundapur robbers who came as customers during gold exhibition steal three lakhs worth gold. 43 grams gold has been stolen. Police are now investigating the case.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm