ಬ್ರೇಕಿಂಗ್ ನ್ಯೂಸ್
02-12-21 10:58 pm Mangaluru Correspondent ಕ್ರೈಂ
ಮಂಗಳೂರು, ಡಿ.2: ಬಜ್ಪೆ ಠಾಣೆ ವ್ಯಾಪ್ತಿಯ ಅಡ್ಡೂರಿನಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಅಂತಾರಾಜ್ಯ ಮಟ್ಟದಲ್ಲಿ ಕುಖ್ಯಾತಿ ಗಳಿಸಿರುವ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
2020ರ ಮೇ ತಿಂಗಳಲ್ಲಿ ಅಡ್ಡೂರು ಗ್ರಾಮದ ಪಲ್ಲಂಗಡಿ ಎಂಬಲ್ಲಿ ಅಹ್ಮದ್ ಬಾವ ಎಂಬವರ ಮನೆಯ ಕಿಟಕಿ ಮುರಿದು ಕಳ್ಳರು ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಬ್ಬಾಸ್, ಇಬ್ರಾಹಿಂ, ನಜೀರ್ ಇತ್ಯಾದಿ ಹೆಸರುಗಳಲ್ಲಿ ಕರೆಸಿಕೊಂಡಿದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಯಪದವು ನಿವಾಸಿ ಅಬ್ಬಾಸ್ ನನ್ನು ಬಂಧಿಸಿದ್ದಾರೆ.
ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ಅಬ್ಬಾಸ್, ಕಳೆದ ಒಂದೂವರೆ ವರ್ಷದಲ್ಲಿ ಬೆಳ್ತಂಗಡಿ, ಕಡಬ. ರಾಮಕುಂಜ, ಪುತ್ತೂರು, ಉಳ್ಳಾಲ ಹೀಗೆ ಹಲವು ಕಡೆಗಳಲ್ಲಿ ವಾಸವಿದ್ದು, ವಾಸವನ್ನು ಬದಲಾಯಿಸುತ್ತಾ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, 5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಅಬ್ಬಾಸ್ ವಿರುದ್ಧ ಕೊಣಾಜೆ, ಉಳ್ಳಾಲ, ಬೆಳ್ತಂಗಡಿ, ಕಾಸರಗೋಡು ಜಿಲ್ಲೆಯ ಕುಂಬಳೆ, ಮಂಜೇಶ್ವರ ಠಾಣೆಗಳಲ್ಲಿ ಮನೆ ಕಳ್ಳತನ, ಗ್ಯಾಸ್ ಸಿಲಿಂಡರ್ ಕಳವು, ಬೈಕ್ ಕಳವು, ಬೀಟೆ ಮರ ಕಳ್ಳತನ ಸೇರಿದಂತೆ 20ಕ್ಕೂ ಹೆಚ್ಚು ಪ್ರಕರಣಗಳಿವೆ. ವಿಚಾರಣೆ ವೇಳೆ ಗಂಜಿಮಠದಲ್ಲಿ ಜೆಸಿಂತಾ ಎಂಬವರ ಡಿಕುನ್ನ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಕಳವಿಗೆ ಯತ್ನಿಸಿರುವ ಬಗ್ಗೆ ತಿಳಿಸಿದ್ದಾನೆ. ಬಜ್ಪೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Interstate Robber Arrested by Bajpe Police in Mangalore. The arrested has been identified as Abbas.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm