ಬ್ರೇಕಿಂಗ್ ನ್ಯೂಸ್
03-12-21 02:42 pm HK Desk news ಕ್ರೈಂ
ಮಂಗಳೂರು, ಡಿ.3: ಮನೆಯ ಹೊರಭಾಗದಲ್ಲಿ ಕಟ್ಟಿಹಾಕಿದ್ದ ಮೂರು ದನಗಳನ್ನು ಮನೆಯವರಿಗೆ ತಲವಾರು ತೋರಿಸಿ, ಸ್ಕಾರ್ಪಿಯೋ ವಾಹನದಲ್ಲಿ ಹೊತ್ತೊಯ್ದ ಘಟನೆ ಕುಳೂರಿನಲ್ಲಿ ನಡೆದಿದ್ದು, ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಇತ್ತೀಚೆಗೆ ನಾಗನ ಕಲ್ಲಿಗೆ ಹಾನಿ ಘಟನೆ ನಡೆದಿದ್ದ ಪ್ರದೇಶದ ಕುಳೂರಿನ ಉಮೇಶ್ ಎಂಬವರ ಮನೆಯ ಆವರಣದಲ್ಲಿ ಘಟನೆ ನಡೆದಿದೆ. ಇಂದು ನಸುಕಿನ ಜಾವ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ನಾಲ್ಕು ಮಂದಿ ಸೇರಿ ಮನೆಯ ಹೊರಗೆ ಕಟ್ಟಿಹಾಕಿದ್ದ ದನಗಳನ್ನು ಸ್ಕಾರ್ಪಿಯೋ ವಾಹನದಲ್ಲಿ ತುಂಬಿಸುತ್ತಿದ್ದುದನ್ನು ಅದೇ ಪರಿಸರದ ಜನರು ನೋಡಿದ್ದಾರೆ. ಈ ಬಗ್ಗೆ ಮನೆಯವರಿಗೆ ತಿಳಿಸಿದ್ದು, ಬಳಿಕ ಸ್ಥಳೀಯರು ಬೊಬ್ಬೆ ಹಾಕುತ್ತಲೇ ಮೂರು ದನಗಳ ಜೊತೆ ಸ್ಕಾರ್ಪಿಯೋ ವಾಹನದಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಈ ಬಗ್ಗೆ ಉಮೇಶ್ ಮತ್ತು ಬಜರಂಗದಳ ಸಂಘಟನೆಯ ನಾಯಕರು ಕಾವೂರು ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಅಲ್ಲದೆ, ಬಜರಂಗದಳ ಸಂಘಟನೆಯ ಪ್ರಮುಖರು ಸದ್ರಿ ಪ್ರದೇಶಕ್ಕೆ ಭೇಟಿ ನೀಡಿದ್ದು, ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕೃತ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಕದ್ದೊಯ್ದ ಗೋವುಗಳನ್ನು ಪತ್ತೆಮಾಡಿ ಮತ್ತೆ ತಂದು ಕೊಡಬೇಕು ಎಂದು ಆಗ್ರಹಿಸಿದ್ದಾರೆ. 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಸ್ಥಳೀಯ ಪರಿಸರದ ನಿವಾಸಿಗಳು ಮತ್ತು ಮಂಗಳೂರಿನ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಡಿ.4ರಂದು ಕಾವೂರು ಠಾಣೆಗೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ.
ಕಾವೂರು, ಪಂಜಿಮೊಗರು, ಕುಳೂರು ಪರಿಸರದಲ್ಲಿ ಕಳೆದ ಹಲವು ದಿನಗಳಲ್ಲಿ ಇದೇ ರೀತಿ ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದೊಯ್ಯುವ ಕೃತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಸ್ಥಳೀಯರು ದೂರು ದಾಖಲಿಸಿಲ್ಲ. ಇಂದಿನ ಕೃತ್ಯ ಬಯಲಾಗುತ್ತಿದ್ದಂತೆ, ನಮ್ಮ ದನವನ್ನೂ ಇದೇ ರೀತಿ ಕದ್ದೊಯ್ದಿದ್ದಾರೆ ಎಂದು ಹಲವರು ಹೇಳತೊಡಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪರಿಸರದ ಜನರು ಆಕ್ರೋಶಿತರಾಗಿದ್ದು, ದುಷ್ಕರ್ಮಿಗಳ ಅಟ್ಟಹಾಸಕ್ಕೆ ಪೊಲೀಸರು ಅಂತ್ಯ ಹಾಡಬೇಕು ಎಂದು ಒತ್ತಾಯಿಸಿದ್ದಾರೆ.
Mnagalore Bangrakuloor Miscreants show talwar and steal cows VHP visit spot. The incident has taken place early in the morning today. Also the VHP has demanded the arrest of the culprits by 24 hours.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am