ಬ್ರೇಕಿಂಗ್ ನ್ಯೂಸ್
14-09-20 11:08 am Headline Karnataka News Network ಕ್ರೈಂ
ಹೊಸದಿಲ್ಲಿ, ಸೆಪ್ಟೆಂಬರ್ 14: ಕಳೆದ ಫೆಬ್ರವರಿಯಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದಲ್ಲಿ ಜವಾಹರಲಾಲ್ ನೆಹರೂ ವಿವಿಯ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರನ್ನು ಬಂಧಿಸಲಾಗಿದೆ.
ಕನಿಷ್ಠ 53 ಮಂದಿ ಮೃತಪಟ್ಟು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡ ಗಲಭೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಪಡೆಯ ವಿಶೇಷ ಘಟಕ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿತ್ತು. ಖಾಲಿದ್ ಅವರನ್ನು ರವಿವಾರ ವಿಚಾರಣೆ ಸಲುವಾಗಿ ಕರೆಸಿಕೊಳ್ಳಲಾಗಿತ್ತು ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೂ ಮುನ್ನ ಎರಡು ತಿಂಗಳಲ್ಲಿ ಎರಡು ಬಾರಿ ಖಾಲಿದ್ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿತ್ತು. "ರವಿವಾರ ರಾತ್ರಿ ಖಾಲಿದ್ ಅವರನ್ನು ಬಂಧಿಸಲಾಗಿದೆ" ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ವಿಶೇಷ ಘಟಕ ಕಳೆದ ತಿಂಗಳು ನ್ಯಾಯಾಲಯದಲ್ಲಿ ಸಲ್ಲಿಸಿದ ಆರೋಪಪಟ್ಟಿ ಪ್ರಕಾರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಮುನ್ನ ಖಾಲಿದ್ ಅವರು ಮಾಜಿ ಎಎಪಿ ಕೌನ್ಸಿಲರ್ ತಾಹೀರ್ ಹುಸೈನ್ ಮತ್ತು ಹೋರಾಟಗಾರರಾದ ಖಾಲಿದ್ ಸೈಫಿ ಜತೆ ಸೇರಿ ದೆಹಲಿ ಗಲಭೆಯ ಸಂಚು ರೂಪಿಸಿದ್ದರು. ನಾಲ್ಕು ಆರೋಪಪಟ್ಟಿಗಳಲ್ಲಿ ವಿವರಿಸಿದಂತೆ ಎಎಪಿ ಮಾಜಿ ಕೌನ್ಸಿಲರ್ ಹುಸೈನ್ ಹಾಗೂ ಸೈಫಿಯವರನ್ನು ಖಾಲಿದ್ ಜನವರಿ 8ರಂದು ಶಹೀನ್ ಭಾಗ್ ಧರಣಿ ಸ್ಥಳದಲ್ಲಿ ಭೇಟಿ ಮಾಡಿ ದಂಗೆಯ ಯೋಜನೆ ರೂಪಿಸಿದ್ದರು. ಆದರೆ ಖಾಲಿದ್ ಪತ್ರಿಕಾ ಹೇಳಿಕೆ ನೀಡಿ ಈ ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು.
ತಾಹೀರ್ ಹುಸೈನ್, ಜಾಮಿಯಾ ವಿದ್ಯಾರ್ಥಿ ಮೀರನ್ ಹೈದರ್, ಜಾಮಿಯಾ ಸಂಚಾಲನಾ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗರ್ ಮತ್ತು ಪಿಂಜ್ರಾ ಟೋಡ್ ಹೋರಾಟಗಾರ್ತಿ ನತಾಶಾ ನರ್ವಾಲ್ ಹಾಗೂ ದೇವಾಂಗನಾ ಕಲಿತಾ ಅವರನ್ನು ಈಗಾಗಲೇ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm