ಬ್ರೇಕಿಂಗ್ ನ್ಯೂಸ್
14-09-20 11:08 am Headline Karnataka News Network ಕ್ರೈಂ
ಹೊಸದಿಲ್ಲಿ, ಸೆಪ್ಟೆಂಬರ್ 14: ಕಳೆದ ಫೆಬ್ರವರಿಯಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದಲ್ಲಿ ಜವಾಹರಲಾಲ್ ನೆಹರೂ ವಿವಿಯ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರನ್ನು ಬಂಧಿಸಲಾಗಿದೆ.
ಕನಿಷ್ಠ 53 ಮಂದಿ ಮೃತಪಟ್ಟು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡ ಗಲಭೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಪಡೆಯ ವಿಶೇಷ ಘಟಕ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿತ್ತು. ಖಾಲಿದ್ ಅವರನ್ನು ರವಿವಾರ ವಿಚಾರಣೆ ಸಲುವಾಗಿ ಕರೆಸಿಕೊಳ್ಳಲಾಗಿತ್ತು ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೂ ಮುನ್ನ ಎರಡು ತಿಂಗಳಲ್ಲಿ ಎರಡು ಬಾರಿ ಖಾಲಿದ್ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿತ್ತು. "ರವಿವಾರ ರಾತ್ರಿ ಖಾಲಿದ್ ಅವರನ್ನು ಬಂಧಿಸಲಾಗಿದೆ" ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ವಿಶೇಷ ಘಟಕ ಕಳೆದ ತಿಂಗಳು ನ್ಯಾಯಾಲಯದಲ್ಲಿ ಸಲ್ಲಿಸಿದ ಆರೋಪಪಟ್ಟಿ ಪ್ರಕಾರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಮುನ್ನ ಖಾಲಿದ್ ಅವರು ಮಾಜಿ ಎಎಪಿ ಕೌನ್ಸಿಲರ್ ತಾಹೀರ್ ಹುಸೈನ್ ಮತ್ತು ಹೋರಾಟಗಾರರಾದ ಖಾಲಿದ್ ಸೈಫಿ ಜತೆ ಸೇರಿ ದೆಹಲಿ ಗಲಭೆಯ ಸಂಚು ರೂಪಿಸಿದ್ದರು. ನಾಲ್ಕು ಆರೋಪಪಟ್ಟಿಗಳಲ್ಲಿ ವಿವರಿಸಿದಂತೆ ಎಎಪಿ ಮಾಜಿ ಕೌನ್ಸಿಲರ್ ಹುಸೈನ್ ಹಾಗೂ ಸೈಫಿಯವರನ್ನು ಖಾಲಿದ್ ಜನವರಿ 8ರಂದು ಶಹೀನ್ ಭಾಗ್ ಧರಣಿ ಸ್ಥಳದಲ್ಲಿ ಭೇಟಿ ಮಾಡಿ ದಂಗೆಯ ಯೋಜನೆ ರೂಪಿಸಿದ್ದರು. ಆದರೆ ಖಾಲಿದ್ ಪತ್ರಿಕಾ ಹೇಳಿಕೆ ನೀಡಿ ಈ ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು.
ತಾಹೀರ್ ಹುಸೈನ್, ಜಾಮಿಯಾ ವಿದ್ಯಾರ್ಥಿ ಮೀರನ್ ಹೈದರ್, ಜಾಮಿಯಾ ಸಂಚಾಲನಾ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗರ್ ಮತ್ತು ಪಿಂಜ್ರಾ ಟೋಡ್ ಹೋರಾಟಗಾರ್ತಿ ನತಾಶಾ ನರ್ವಾಲ್ ಹಾಗೂ ದೇವಾಂಗನಾ ಕಲಿತಾ ಅವರನ್ನು ಈಗಾಗಲೇ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm