ಬ್ರೇಕಿಂಗ್ ನ್ಯೂಸ್
04-12-21 07:35 pm HK Desk news ಕ್ರೈಂ
ಬೆಂಗಳೂರು, ಡಿ.4 : ಯುವತಿಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೇಳಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 19 ವರ್ಷದ ಸಂತ್ರಸ್ತ ಯುವತಿ ನೀಡಿದ ದೂರಿನಂತೆ, ಆಕೆಯ ಸ್ನೇಹಿತರಾದ ದೇವಸಂದ್ರ ನಿವಾಸಿಗಳಾದ ಬ್ರಿಜ್ ಭೂಷಣ್ ಯಾದವ್ (21) ಮತ್ತು ವಿವೇಕ್ ರೆಡ್ಡಿ (20) ಎಂಬವರನ್ನು ಬಂಧಿಸಲಾಗಿದೆ.
ಕೆ.ಆರ್.ಪುರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಯುವತಿಗೆ ಆರೋಪಿ ಬ್ರಿಜ್ಭೂಷಣ್ ಪರಿಚಯವಾಗಿತ್ತು. ಬಳಿಕ ಇಬ್ಬರು ಸ್ನೇಹಿತರಾಗಿದ್ದರು. ಆರೋಪಿ ಪದೇ ಪದೆ ಸಂತ್ರಸ್ತೆಯ ಮನೆಗೆ ಬರುತ್ತಿದ್ದ. ಆನಂತರ ಯುವತಿ ಆರೋಪಿ ಯಿಂದ ಅಂತರ ಕಾಯ್ದುಕೊಂಡಿದ್ದಳು. ಈ ನಡುವೆ ಆರೋಪಿ 2018ರಲ್ಲಿ 'ನನ್ನ ಬಳಿ ನಿನ್ನ ಬೆತ್ತಲೆ ಫೋಟೋಗಳಿವೆ. ಹಣ, ಚಿನ್ನಾಭರಣ ತಂದು ಕೊಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೋಗಳನ್ನು ಹಾಕುತ್ತೇನೆ' ಎಂದು ಬೆದರಿಕೆಯೊ ಡ್ಡುತ್ತಿದ್ದ.
ಇದರಿಂದ ಆತಂಕಗೊಂಡ ಯುವತಿ ಮನೆಯಲ್ಲಿದ್ದ 218 ಗ್ರಾಂ ಚಿನ್ನಾಭರಣ, 75 ಸಾವಿರ ರು. ನಗದು ಕೊಟ್ಟಿದ್ದಳು. ಇದೇ ವೇಳೆ, ಯುವತಿಯ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದ ಬ್ರಿಜ್ ಭೂಷಣ್ನ ಸ್ನೇಹಿತ ವಿವೇಕ್ ರೆಡ್ಡಿ 2019ರಲ್ಲಿ ಫೇಸ್ಬುಕ್ನಲ್ಲಿ ಯುವತಿಯೊಂದಿಗೆ ಚಾಟ್ ಮಾಡುತ್ತಿದ್ದ. ಬಳಿಕ ರಾಚೇನಹಳ್ಳಿ ಕೆರೆ ಬಳಿ ಕರೆಸಿಕೊಂಡು ಅಸಭ್ಯವಾಗಿ ನಡೆದುಕೊಂಡಿದ್ದ. ಒಮ್ಮೆ ಕರೆ ಮಾಡಿ 'ನಿನ್ನ ಖಾಸಗಿ ಫೋಟೋ' ಇದೆ ಎಂದು ಬೆದರಿಸಿದ್ದು ಬ್ಲಾಕ್ ಮೇಲ್ ಆರಂಭಿಸಿದ್ದ.
ಹಣ, ಒಡವೆ ಕೊಡದಿದ್ದರೆ ಖಾಸಗಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತೇನೆ ಎಂದು ಬೆದರಿಸಿದ್ದ. ಇದರಿಂದ ಹೆದರಿದ ಸಂತ್ರಸ್ತೆ, ತನ್ನ ಮಾವನ ಪತ್ನಿಯ ಮಾಂಗಲ್ಯ ಸರ ತಂದು ಕೊಟ್ಟಿದ್ದಳು. ಆದರೂ ಆರೋಪಿಗಳು ಪದೇ ಪದೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಇದರಿಂದ ಬೇಸತ್ತ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Bangalore Two arrested for blackmailing girl of her nude pics. Blackmailers had demanded gold and cash from her after which the girl had given it to them.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm