ಬ್ರೇಕಿಂಗ್ ನ್ಯೂಸ್
07-12-21 12:39 pm HK Desk news ಕ್ರೈಂ
ಮುಜಾಫರ್ ನಗರ, ಡಿ.7: ಹತ್ತನೇ ತರಗತಿಯ 17 ಮಂದಿ ಶಾಲಾ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಡ್ರಗ್ ಪೂರೈಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಎರಡು ಶಾಲೆಯ ಮ್ಯಾನೇಜರ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುಜಾಫರ್ ನಗರ ಜಿಲ್ಲೆಯ ಪುರ್ಕಾಜಿ ಟೌನ್ ನಲ್ಲಿ ಘಟನೆ ನಡೆದಿದ್ದು, ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ಎರಡು ಸ್ಕೂಲ್ ಮ್ಯಾನೇಜರ್ ಗಳು ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಡ್ರಗ್ಸ್ ಪೂರೈಸಿ, 17 ಮಂದಿ ಹತ್ತನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಸ್ಥಳೀಯ ಪೊಲೀಸರಿಗೆ ಮತ್ತು ಪತ್ರಕರ್ತರಿಗೆ ಒತ್ತಡ ಹಾಕಿ ಮುಚ್ಚಿ ಹಾಕಲು ಯತ್ನ ನಡೆದಿತ್ತು.
ವಿಷಯ ತಿಳಿದ ಸ್ಥಳೀಯ ಬಿಜೆಪಿ ಶಾಸಕ ಪ್ರಮೋದ್ ಉತ್ವಾಲ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ 17 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಕೂಡ ಈ ಬಗ್ಗೆ ಸ್ಕೂಲ್ ಮ್ಯಾನೇಜರ್ ಗಳು ಬೆದರಿಕೆ ಹಾಕಿದ್ದರು. ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕ್ಲಾಸ್ ನಲ್ಲಿ ಫೇಲ್ ಮಾಡೋದಾಗಿ ಮತ್ತು ನಿಮ್ಮ ಹೆತ್ತವರನ್ನು ಕೊಲ್ಲುವುದಾಗಿ ಬೆದರಿಸಿದ್ದರು.
ಘಟನೆ ನಡೆದ ಮರುದಿನ ಶಾಲೆಗೆ ರಜೆ ಹಾಕಿದ್ದ ವಿದ್ಯಾರ್ಥಿನಿಯರು ಪ್ರಕರಣದ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದರು. ಶಾಲಾ ವಿದ್ಯಾರ್ಥಿನಿಯರು ತಮಗೆ ರಾತ್ರಿ ವೇಳೆಗೆ ಊಟ ಮಾಡಲು ಖಿಚಡಿ ತಯಾರಿಸಿದ್ದರು. ಆದರೆ, ಸ್ಕೂಲ್ ಮ್ಯಾನೇಜರ್ ಅಲ್ಲಿಗೆ ಬಂದು ಖಿಚಡಿಯನ್ನು ಎಸೆದು ಬೇರೆಯದ್ದೇ ಆಹಾರ ತಯಾರಿಸುವಂತೆ ಮಾಡಿದ್ದರು. ಅದಕ್ಕೆ ಏನೋ ಅಮಲು ಪದಾರ್ಥ ಹಾಕಿದ್ದರು ಎಂಬ ಆರೋಪವನ್ನು ವಿದ್ಯಾರ್ಥಿನಿಯರು ಮಾಡಿದ್ದಾರೆ. ಇಬ್ಬರು ಸ್ಕೂಲ್ ಮ್ಯಾನೇಜರ್ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
FIR has been lodged against the managers of two schools in UP’s Muzaffarnagar after 17 girls of Class 10 were drugged and then allegedly molested on the pretext of a practical exam.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm