ಬ್ರೇಕಿಂಗ್ ನ್ಯೂಸ್
14-09-20 04:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆಪ್ಟಂಬರ್ 14: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದನಗಳ್ಳರ ಅಟ್ಟಹಾಸವನ್ನು ಕಿರುತೆರೆ ನಟ ರವಿತೇಜ ಬಿಚ್ಚಿಟ್ಟಿದ್ದಾರೆ. ರಾತ್ರೋರಾತ್ರಿ ಪಿಕಪ್ ವಾಹನಗಳಲ್ಲಿ ಬಂದು ರಸ್ತೆಯಲ್ಲಿ ಮಲಗುತ್ತಿದ್ದ ದನಗಳನ್ನು ಹಿಡಿದು ವಾಹನಕ್ಕೆ ತುಂಬಿಸುತ್ತಿದ್ದಾಗ, ರವಿತೇಜ ಮತ್ತು ಆತನ ಗೆಳೆಯರು ತಡೆಯಲು ಹೋಗಿದ್ದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ರೂ ಅವರು ಕ್ಯಾರ್ ಮಾಡಿಲ್ಲವೆಂದು ಅಲ್ಲಿಂದಲೇ ರವಿತೇಜ ಫೇಸ್ಬುಕ್ ಲೈವ್ ಬಂದು ನೋವು ಹೇಳಿಕೊಂಡಿದ್ದಾರೆ.
ಮೂಡಿಗೆರೆಯವರೇ ಆಗಿರುವ ಕಿರುತೆರೆ ನಟ ರವಿತೇಜ, ಶೂಟಿಂಗ್ ಸ್ಪಾಟ್ ಸ್ಥಳ ವೀಕ್ಷಣೆಗೆ ಹೋಗಿ ಹಿಂತಿರುಗುತ್ತಿದ್ದಾಗ ಕಿಡಿಗೇಡಿಗಳ ಕೃತ್ಯ ಕಂಡು ತಡೆಯಲು ಹೋಗಿದ್ದಾರೆ. ಆದರೆ, ಪಿಕಪ್ ವಾಹನ ನಿಲ್ಲಿಸದೆ ಪರಾರಿಯಗಲು ಯತ್ನಿಸಿದ್ದಲ್ಲದೆ ರವಿತೇಜ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಅಲ್ಲದೆ, ತಲವಾರಿನಿಂದ ರವಿತೇಜ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ನಡುರಾತ್ರಿಯಲ್ಲಿ ಮೂಡಿಗೆರೆ ಪೇಟೆಯಿಂದಲೇ ಫೇಸ್ಬುಕ್ ಲೈವ್ ಮಾಡಿದ ರವಿತೇಜ, ಐದಾರು ಮಂದಿ ಸೇರಿ ನನಗೆ ತಲವಾರಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಕೈಗೆ ಮತ್ತು ತಲೆಗೆ ಪೆಟ್ಟಾಗಿದೆ. ಸ್ವಲ್ಪದರಲ್ಲಿ ಬಚಾವಾಗಿದ್ದೇನೆ. ಬದುಕಿ ಉಳಿದಿದ್ದೇ ಹೆಚ್ಚು. ಈ ಬಗ್ಗೆ ಮೂಡಿಗೆರೆ ಪೊಲೀಸರಿಗೆ ಹೇಳಿದ್ರೂ ಕ್ಯಾರ್ ಮಾಡಿಲ್ಲ. ಇಲ್ಲಿನ ಹಿಂದು ಸಾಮ್ರಾಟರು ಎಲ್ಲಿದ್ದಾರೆ. ಹಿಂದು ಹಿಂದು ಎಂದು ಭಾಷಣ ಮಾಡೋರಿಗೆ ಇದು ಕಾಣಿಸೋಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪಾಪದ ದನಗಳನ್ನು ಕದ್ದು ಸಾಗಿಸುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ. ನಾವು ನಂಬರ್ ನೋಟ್ ಮಾಡಿದ್ದೇವೆ. ಕೆಎ 18 - 0821 ನಂಬರಿನ ಪಿಕಪ್ ವಾಹನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮೂಡಿಗೆರೆಯನ್ನು ಈ ದನಗಳ್ಳರಿಂದ ರಕ್ಷಿಸಿ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates
video
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm