ಬ್ರೇಕಿಂಗ್ ನ್ಯೂಸ್
14-09-20 04:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆಪ್ಟಂಬರ್ 14: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದನಗಳ್ಳರ ಅಟ್ಟಹಾಸವನ್ನು ಕಿರುತೆರೆ ನಟ ರವಿತೇಜ ಬಿಚ್ಚಿಟ್ಟಿದ್ದಾರೆ. ರಾತ್ರೋರಾತ್ರಿ ಪಿಕಪ್ ವಾಹನಗಳಲ್ಲಿ ಬಂದು ರಸ್ತೆಯಲ್ಲಿ ಮಲಗುತ್ತಿದ್ದ ದನಗಳನ್ನು ಹಿಡಿದು ವಾಹನಕ್ಕೆ ತುಂಬಿಸುತ್ತಿದ್ದಾಗ, ರವಿತೇಜ ಮತ್ತು ಆತನ ಗೆಳೆಯರು ತಡೆಯಲು ಹೋಗಿದ್ದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ರೂ ಅವರು ಕ್ಯಾರ್ ಮಾಡಿಲ್ಲವೆಂದು ಅಲ್ಲಿಂದಲೇ ರವಿತೇಜ ಫೇಸ್ಬುಕ್ ಲೈವ್ ಬಂದು ನೋವು ಹೇಳಿಕೊಂಡಿದ್ದಾರೆ.
ಮೂಡಿಗೆರೆಯವರೇ ಆಗಿರುವ ಕಿರುತೆರೆ ನಟ ರವಿತೇಜ, ಶೂಟಿಂಗ್ ಸ್ಪಾಟ್ ಸ್ಥಳ ವೀಕ್ಷಣೆಗೆ ಹೋಗಿ ಹಿಂತಿರುಗುತ್ತಿದ್ದಾಗ ಕಿಡಿಗೇಡಿಗಳ ಕೃತ್ಯ ಕಂಡು ತಡೆಯಲು ಹೋಗಿದ್ದಾರೆ. ಆದರೆ, ಪಿಕಪ್ ವಾಹನ ನಿಲ್ಲಿಸದೆ ಪರಾರಿಯಗಲು ಯತ್ನಿಸಿದ್ದಲ್ಲದೆ ರವಿತೇಜ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಅಲ್ಲದೆ, ತಲವಾರಿನಿಂದ ರವಿತೇಜ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ನಡುರಾತ್ರಿಯಲ್ಲಿ ಮೂಡಿಗೆರೆ ಪೇಟೆಯಿಂದಲೇ ಫೇಸ್ಬುಕ್ ಲೈವ್ ಮಾಡಿದ ರವಿತೇಜ, ಐದಾರು ಮಂದಿ ಸೇರಿ ನನಗೆ ತಲವಾರಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಕೈಗೆ ಮತ್ತು ತಲೆಗೆ ಪೆಟ್ಟಾಗಿದೆ. ಸ್ವಲ್ಪದರಲ್ಲಿ ಬಚಾವಾಗಿದ್ದೇನೆ. ಬದುಕಿ ಉಳಿದಿದ್ದೇ ಹೆಚ್ಚು. ಈ ಬಗ್ಗೆ ಮೂಡಿಗೆರೆ ಪೊಲೀಸರಿಗೆ ಹೇಳಿದ್ರೂ ಕ್ಯಾರ್ ಮಾಡಿಲ್ಲ. ಇಲ್ಲಿನ ಹಿಂದು ಸಾಮ್ರಾಟರು ಎಲ್ಲಿದ್ದಾರೆ. ಹಿಂದು ಹಿಂದು ಎಂದು ಭಾಷಣ ಮಾಡೋರಿಗೆ ಇದು ಕಾಣಿಸೋಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪಾಪದ ದನಗಳನ್ನು ಕದ್ದು ಸಾಗಿಸುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ. ನಾವು ನಂಬರ್ ನೋಟ್ ಮಾಡಿದ್ದೇವೆ. ಕೆಎ 18 - 0821 ನಂಬರಿನ ಪಿಕಪ್ ವಾಹನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮೂಡಿಗೆರೆಯನ್ನು ಈ ದನಗಳ್ಳರಿಂದ ರಕ್ಷಿಸಿ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates
video
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm