ಬ್ರೇಕಿಂಗ್ ನ್ಯೂಸ್
14-09-20 04:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆಪ್ಟಂಬರ್ 14: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದನಗಳ್ಳರ ಅಟ್ಟಹಾಸವನ್ನು ಕಿರುತೆರೆ ನಟ ರವಿತೇಜ ಬಿಚ್ಚಿಟ್ಟಿದ್ದಾರೆ. ರಾತ್ರೋರಾತ್ರಿ ಪಿಕಪ್ ವಾಹನಗಳಲ್ಲಿ ಬಂದು ರಸ್ತೆಯಲ್ಲಿ ಮಲಗುತ್ತಿದ್ದ ದನಗಳನ್ನು ಹಿಡಿದು ವಾಹನಕ್ಕೆ ತುಂಬಿಸುತ್ತಿದ್ದಾಗ, ರವಿತೇಜ ಮತ್ತು ಆತನ ಗೆಳೆಯರು ತಡೆಯಲು ಹೋಗಿದ್ದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ರೂ ಅವರು ಕ್ಯಾರ್ ಮಾಡಿಲ್ಲವೆಂದು ಅಲ್ಲಿಂದಲೇ ರವಿತೇಜ ಫೇಸ್ಬುಕ್ ಲೈವ್ ಬಂದು ನೋವು ಹೇಳಿಕೊಂಡಿದ್ದಾರೆ.
ಮೂಡಿಗೆರೆಯವರೇ ಆಗಿರುವ ಕಿರುತೆರೆ ನಟ ರವಿತೇಜ, ಶೂಟಿಂಗ್ ಸ್ಪಾಟ್ ಸ್ಥಳ ವೀಕ್ಷಣೆಗೆ ಹೋಗಿ ಹಿಂತಿರುಗುತ್ತಿದ್ದಾಗ ಕಿಡಿಗೇಡಿಗಳ ಕೃತ್ಯ ಕಂಡು ತಡೆಯಲು ಹೋಗಿದ್ದಾರೆ. ಆದರೆ, ಪಿಕಪ್ ವಾಹನ ನಿಲ್ಲಿಸದೆ ಪರಾರಿಯಗಲು ಯತ್ನಿಸಿದ್ದಲ್ಲದೆ ರವಿತೇಜ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಅಲ್ಲದೆ, ತಲವಾರಿನಿಂದ ರವಿತೇಜ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ನಡುರಾತ್ರಿಯಲ್ಲಿ ಮೂಡಿಗೆರೆ ಪೇಟೆಯಿಂದಲೇ ಫೇಸ್ಬುಕ್ ಲೈವ್ ಮಾಡಿದ ರವಿತೇಜ, ಐದಾರು ಮಂದಿ ಸೇರಿ ನನಗೆ ತಲವಾರಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಕೈಗೆ ಮತ್ತು ತಲೆಗೆ ಪೆಟ್ಟಾಗಿದೆ. ಸ್ವಲ್ಪದರಲ್ಲಿ ಬಚಾವಾಗಿದ್ದೇನೆ. ಬದುಕಿ ಉಳಿದಿದ್ದೇ ಹೆಚ್ಚು. ಈ ಬಗ್ಗೆ ಮೂಡಿಗೆರೆ ಪೊಲೀಸರಿಗೆ ಹೇಳಿದ್ರೂ ಕ್ಯಾರ್ ಮಾಡಿಲ್ಲ. ಇಲ್ಲಿನ ಹಿಂದು ಸಾಮ್ರಾಟರು ಎಲ್ಲಿದ್ದಾರೆ. ಹಿಂದು ಹಿಂದು ಎಂದು ಭಾಷಣ ಮಾಡೋರಿಗೆ ಇದು ಕಾಣಿಸೋಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪಾಪದ ದನಗಳನ್ನು ಕದ್ದು ಸಾಗಿಸುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ. ನಾವು ನಂಬರ್ ನೋಟ್ ಮಾಡಿದ್ದೇವೆ. ಕೆಎ 18 - 0821 ನಂಬರಿನ ಪಿಕಪ್ ವಾಹನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮೂಡಿಗೆರೆಯನ್ನು ಈ ದನಗಳ್ಳರಿಂದ ರಕ್ಷಿಸಿ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates
video
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm