ಬ್ರೇಕಿಂಗ್ ನ್ಯೂಸ್
10-12-21 11:39 pm HK Desk news ಕ್ರೈಂ
ಮಂಗಳೂರು, ಡಿ.10 : ನಗರ ಹೊರವಲಯದ ನೀರುಮಾರ್ಗ ಬಳಿಯ ಪಡು ಎಂಬಲ್ಲಿ ಹಿಂದು ಯುವತಿಯ ಜೊತೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಡ್ಯಾರು ಪದವು ನಿವಾಸಿ ಅಬ್ದುಲ್ ರಜಾಕ್ ಯಾನೆ ರಿಯಾಜ್ ಹಲ್ಲೆಗೊಳಗಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದು ಯುವತಿ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ನೀರುಮಾರ್ಗದ ಬಳಿ ಯುವಕರ ತಂಡ ತಡೆದು ನಿಲ್ಲಿಸಿದೆ.


ಯುವಕ, ಯುವತಿಯನ್ನು ಕಾರಿನಲ್ಲಿ ಮಲ್ಲೂರು ಕಡೆಗೆ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮೊದಲೇ ಮಾಹಿತಿ ಇದ್ದ ಯುವಕರ ತಂಡ, ಪಡು ಅಂಚೆ ಕಚೇರಿ ಬಳಿ ಕಾರನ್ನು ತಡೆದು ಯುವತಿ ಮತ್ತು ಯುವಕನನ್ನು ಪ್ರಶ್ನೆ ಮಾಡಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದಿದ್ದು ಅಬ್ದುಲ್ ರಜಾಕ್ ಮೇಲೆ ಐದಾರು ಮಂದಿಯ ತಂಡ ಹಲ್ಲೆ ನಡೆಸಿದೆ. ಯುವಕನ ತಲೆಗೆ ಬೀಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದು ತಲೆಗೆ ಏಟು ಬಿದ್ದು ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಆತನನ್ನು ಅಂಬುಲೆನ್ಸ್ನಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಯುವತಿ ಮೇಲೂ ಏಟು ಬಿದ್ದಿದ್ದು ಆಕೆ ಓಡಿ ತಪ್ಪಿಸಿಕೊಂಡಿದ್ದಾಳೆ.


ಮಂಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸ್ಥಳಕ್ಕೆ ತೆರಳಿದ್ದು ಕ್ರಮಕ್ಕೆ ಸೂಚಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಹಲ್ಲೆಯಾದ ಯುವಕ ಅಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
Mangalore Hindu activists assault Muslim youth with beer bottle as Hindu girl was in the car in Adyarpadavu. He has been admitted to the private hospital in city and is said to be out of danger. A case has been registered at the Rural Police Station.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm