ಬ್ರೇಕಿಂಗ್ ನ್ಯೂಸ್
11-12-21 05:15 pm HK Desk news ಕ್ರೈಂ
ಹಾಸನ, ಡಿ.11 : ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ಮಾಡಿ, ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬೆಕ್ಕ ಗ್ರಾಮದಲ್ಲಿ ನಡೆದಿದೆ.
ದೇವರು ಹೆಸರಿನಲ್ಲಿ ವಂಚನೆ ಮಾಡುವುದನ್ನು ನೋಡಿದ್ದೀವಿ, ದೇವರ ಹೆಸರಿನಲ್ಲಿ ಶಿಕ್ಷೆ ನೀಡುವುದನ್ನು ನೋಡಿದ್ದೀವಿ, ಆದರೆ ಇಲ್ಲೊಬ್ಬ ಪೂಜಾರಿ ಪೂಜೆ ವೇಳೆ ನನಗೆ ದೇವರು ಬಂದಿದೆ, ನಾನು ನಿನ್ನನ್ನು ಕಾಯಿಲೆಯಿಂದ ಗುಣಪಡಿಸುತ್ತೇನೆಂದು ಹೇಳಿ ಬೆತ್ತದ ಕೋಲಿನಲ್ಲಿ ತಲೆಗೆ ಬಲವಾಗಿ ಹೊಡೆದು ಮಹಿಳೆಯೇ ಸಾಯುವಂತಾಗಿದೆ.
ಪೂಜಾರಿ ನೀಡಿದ ಬೆತ್ತದ ಏಟಿಗೆ 47 ವರ್ಷದ ಪಾರ್ವತಿ ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಪಾರ್ವತಿ, ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ದೇವರ ಮೊರೆ ಹೋಗಿದ್ದರು.
ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ದೇವಸ್ಥಾನದ ಪೂಜಾರಿ ತಿಳಿಸಿದ್ದು ಅದರಂತೆ ಪೂಜೆ ಮಾಡುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ. ಹಿರಿಯಾಪಟ್ಟಣದ ದೇವಸ್ಥಾನದ ಪೂಜಾರಿಯು ಬೆತ್ತದಿಂದ ತಲೆಗೆ ಹೊಡೆದ ಪರಿಣಾಮ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಆಕೆ ಚಿಕಿತ್ಸೆ ಫಲಕಾರಿಯಾಗದೇ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆ ನಂತರ ಪೂಜಾರಿ ಮಧು ನಾಪತ್ತೆಯಾಗಿದ್ದು, ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A woman who was beaten up by a priest in the guise of removing evil spirits bothering her health died at Hassan Institute of Medical Sciences in Hassan on Wednesday. Parvathi, 37, of Gowdarahalli in Channarayapatna was allegedly beaten up by Manu, a priest at Bekka village in Channarayapatna taluk, on Tuesday.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm