ಬ್ರೇಕಿಂಗ್ ನ್ಯೂಸ್
15-12-21 12:56 pm HK Desk news ಕ್ರೈಂ
ಮಂಗಳೂರು, ಡಿ.15 : ನಗರ ಹೊರವಲಯದ ನೀರುಮಾರ್ಗ ಬಳಿಯ ಪಡು ಬೊಂಡಂತಿಲ ಎಂಬಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧಿಸಿ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಹಿಂದು ಹುಡುಗಿಯನ್ನು ಕಾರಿನಲ್ಲಿ ಒಯ್ಯುತ್ತಿದ್ದ ಕಾರಣಕ್ಕೆ ಹಿಂದು ಸಂಘಟನೆಗೆ ಸೇರಿದ ಯುವಕರು ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಅಡ್ಯಾರು ಪದವು ನಿವಾಸಿ ಮಹಮ್ಮದ್ ರಿಯಾಜ್ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿತ್ತು. ಡಿ.10ರಂದು ಸಂಜೆ 7.30ರ ಸುಮಾರಿಗೆ ಘಟನೆ ನಡೆದಿತ್ತು. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಇದೀಗ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೊಂಡಂತಿಲ ನಿವಾಸಿ ಗಣೇಶ್ (23), ಚೇತನ್ ಕುಮಾರ್ (21), ಕಟ್ಟಿಂಜ ಸೈಟ್ ನಿವಾಸಿ ಕೀರ್ತಿರಾಜ್ (23), ನೀರುಮಾರ್ಗದ ಸುವೀತ್ (19), ಪರೀಕ್ಷಿತ್ (20) ಬಂಧಿತರು. ಬ್ಯಾಟ್, ರಾಡ್ ನಿಂದ ಹಲ್ಲೆ ನಡೆಸಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ರಿಯಾಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಯಾಜ್, ಹಿಂದು ಯುವತಿಯನ್ನು ಕಾರಿನಲ್ಲಿ ಒಯ್ಯುತ್ತಿದ್ದ ವಿಚಾರಕ್ಕೆ ಹಲ್ಲೆ ನಡೆಸಲಾಗಿತ್ತು. ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.


ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ
ಪೊಲೀಸರ ಮಾಹಿತಿ ಪ್ರಕಾರ, ರಿಯಾಜ್ ಹಿಂದಿನಿಂದಲೂ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದ. ಪಂಪ್ವೆಲ್ ಲಾಡ್ಜ್ ನಲ್ಲಿ ಸಿಕ್ಕಿಬಿದ್ದು ಈ ಹಿಂದೆಯೂ ಪ್ರಕರಣ ದಾಖಲಾಗಿತ್ತು. ಮೈಸೂರು ಮೂಲದ ಯುವತಿಯರನ್ನು ಮಂಗಳೂರಿನ ವಿವಿಧ ಕಡೆಗಳಿಗೆ ಪೂರೈಸುವ ಕೆಲಸ ಮಾಡುತ್ತಿದ್ದ. ಈ ಬಗ್ಗೆ ಮೊದಲೇ ಮಾಹಿತಿ ಹೊಂದಿದ್ದ ಹಿಂದು ಸಂಘಟನೆಯ ಯುವಕರು ರಿಯಾಜ್ ಮೇಲೆ ಕಣ್ಣಿಟ್ಟು ನೀರುಮಾರ್ಗದ ಬಳಿ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಮೂಲದ ಹಿಂದು ಯುವತಿ ಇದ್ದಳು ಎನ್ನಲಾಗಿದೆ.


ರಿಯಾಜ್ ಮೇಲಿನ ಹಲ್ಲೆ ಘಟನೆಯ ಬಳಿಕ ಕದ್ರಿ ಪೊಲೀಸರು ಕಂಕನಾಡಿ ಬಳಿಯ ಮನೆಯೊಂದಕ್ಕೆ ದಾಳಿ ನಡೆಸಿದ್ದು, ಅಲ್ಲಿದ್ದ ಒಬ್ಬ ಯುವತಿ ಮತ್ತು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲಿಯ ದಂಧೆಯನ್ನೂ ರಿಯಾಜ್ ಮಾಡಿಕೊಂಡಿದ್ದ ಎನ್ನುವ ಮಾಹಿತಿಯಿದ್ದು, ಪೊಲೀಸರು ಅದರ ಬಗ್ಗೆ ಕೇಸು ದಾಖಲಿಸಿದ್ದಾರೆ. ಈತನ ದಂಧೆಯ ಬಗ್ಗೆ ತಿಳಿದಿರುವ ಕಾರಣ ಮುಸ್ಲಿಂ ಸಂಘಟನೆಗಳು ಕೂಡ ರಿಯಾಜ್ ಪರ ಬೆಂಬಲವಾಗಿ ನಿಂತಿಲ್ಲ ಎಂದು ಹೇಳಲಾಗುತ್ತಿದೆ.
Regarding the assault incident at Adyar Padavu on December 10, five persons have been arrested and produced to court. The five arrested are identified as Ganesh (24), resident of Kapettu site, Bondantila village, Chetan Kumar (21) from Bantukatta, Padu, Bondantila village, Keertiraj (23), Kattinja site, Padu, Bondantila, Suveeth (20), Rangapade, Neermarga, and Pareekshit (21) residing near Padu post office, Bondatila village. Police commissioner N Shashi Kumar said, “The accused were known to Riaz. The accused and the victim had clashes earlier on past issues.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm