ಬ್ರೇಕಿಂಗ್ ನ್ಯೂಸ್
14-09-20 08:46 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ಸ್ಯಾಂಡಲ್ ವುಡ್ ಡ್ರಗ್ಸ್ ಆರೋಪ ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಸೇರಿ ಐವರನ್ನು ನಗರದ 1ನೆ ಎಸಿಎಂಎಂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆ ಆರೋಪಿಗಳನ್ನು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ರವಾನೆ ಮಾಡಲಾಯಿತು.
ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಜನಾ, ರಾಗಿಣಿ ಜೊತೆ ಆರೋಪಿಗಳನ್ನು 1ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ರಾಗಿಣಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ನಟಿ ಸಂಜನಾರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿತು.
ವಿಧಿವಿಜ್ಞಾನ ಕೇಂದ್ರದಲ್ಲಿ ಒಬ್ಬರನ್ನೊಬ್ಬರು ಬಿಟ್ಟು ಹೋಗುವಾಗ ಇಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಸಂಜನಾ ಕಣ್ಣೀರು ಹಾಕಿ ರಾಗಿಣಿಗೆ ವಿದಾಯ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೂ ಮೊದಲು ಇಬ್ಬರ ಸಂಬಂಧ ಅಷ್ಟಕ್ಕಷ್ಟೇ ಇತ್ತು. ಆದರೆ ಕಳೆದ 8 ದಿನಗಳಿಂದ ರಾಗಿಣಿ ಮತ್ತು ಸಂಜನಾ ಒಂದಾಗಿದ್ದರು. ಮೊದ ಮೊದಲು ಇಬ್ಬರ ನಡುವೆ ಅಸಮಾಧಾನವಿದ್ದರೂ ನಂತರ ಇಬ್ಬರು ಜೊತೆಯಾಗಿದ್ದರು.
ರೀಲ್ ನಲ್ಲಿ ಪೊಲೀಸ್ ಆಗಿದ್ದ ರಾಗಿಣಿ ಇಂದು ರಿಯಲ್ಲಾಗಿ ಖೈದಿಯಾಗುತ್ತಿದ್ದಾರೆ. ರಾಗಿಣಿ ಐಪಿಎಸ್ ಚಿತ್ರದಲ್ಲಿ ಕಾಪ್ ರೋಲ್ ನಲ್ಲಿ ರಾಗಿಣಿ ಮಿಂಚಿಸಿದ್ದಾರೆ.
ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ವಾಹನದಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ಈ ಮೂಲಕ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲುಪಾಲದ ಮೊದಲ ನಟಿ ಎಂಬ ಕುಖ್ಯಾತಿಗೆ ರಾಗಿಣಿ ಪಾತ್ರವಾಗಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm