ಬ್ರೇಕಿಂಗ್ ನ್ಯೂಸ್
25-12-21 10:19 pm HK Desk news ಕ್ರೈಂ
ಪುತ್ತೂರು, ಡಿ.25 : ಸೇನಾಧಿಕಾರಿ ಸೋಗಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಉಪ್ಪಿನಂಗಡಿಯ ತರಕಾರಿ ವ್ಯಾಪಾರಸ್ಥರೊಬ್ಬರನ್ನು ಯಾಮಾರಿಸಲು ಯತ್ನಿಸಿದ ಘಟನೆ ನಡೆದಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಬಳಿಯ ತರಕಾರಿ ವ್ಯಾಪಾರಿಗೆ ವ್ಯಕ್ತಿಯೊಬ್ಬ ವಾಟ್ಸಪ್ ಕರೆ ಮಾಡಿದ್ದು, ತನ್ನ ಹೆಸರನ್ನು ಅಮನ್ ಕುಮಾರ್ ಎಂದು ಹೇಳಿಕೊಂಡಿದ್ದಾನೆ. ಹಿಂದಿಯಲ್ಲಿ ಮಾತನಾಡಿದ್ದ ವ್ಯಕ್ತಿ ತಾನು ಸೇನೆಯಲ್ಲಿ ಕೆಲಸ ಮಾಡುತ್ತಿದ್ದು, ಇಲ್ಲಿಯೇ 5 ಕಿಮೀ ಹತ್ತಿರದಲ್ಲಿ ಸೇನಾ ಕ್ಯಾಂಪ್ ಮಾಡಿದ್ದೇವೆ. ಅಲ್ಲಿಗೆ ತರಕಾರಿ ಅಗತ್ಯವಿದ್ದು ಕಳುಹಿಸಿಕೊಡಬಹುದಾ ಎಂದು ಕೇಳಿದ್ದಾನೆ. ಅದಕ್ಕೆ ವ್ಯಾಪಾರಿ ಒಪ್ಪಿದ್ದು, ಲಿಸ್ಟ್ ಕಳುಹಿಸಲು ಹೇಳಿದ್ದಾರೆ. ಹಿಂದಿಯಲ್ಲೇ ಬರೆದಿದ್ದ ಲಿಸ್ಟ್ ಅನ್ನು ಕಳುಹಿಸಿದ್ದಾನೆ. ತರಕಾರಿಯ ಪ್ರಮಾಣ ಹೆಚ್ಚಿದ್ದು, ಅದನ್ನು ಹೇಗಾದ್ರೂ ತುಂಬಿಸಿ ಕೊಡುತ್ತೇನೆ ಎಂದು ವ್ಯಾಪಾರಿ ತಿಳಿಸಿದ್ದಾರೆ.
ಆಬಳಿಕ ಕರೆ ಮಾಡಿದ್ದ ವ್ಯಕ್ತಿ ಸೇನೆಯಲ್ಲಿ ಕ್ಯಾಶ್ ಕೊಡುವ ಪದ್ಧತಿ ಇಲ್ಲ. ನಿಮ್ಮ ಬಿಲ್ಲನ್ನು ಬ್ಯಾಂಕ್ ಖಾತೆಗೆ ಕಳುಹಿಸುತ್ತೇವೆ. ಬ್ಯಾಂಕ್ ಖಾತೆಯ ವಿವರ ಕಳಿಸಿಕೊಡಿ ಎಂದಿದ್ದಾನೆ. ತರಕಾರಿ ವ್ಯಾಪಾರಿ ತನ್ನ ಬ್ಯಾಂಕ್ ಖಾತೆಯ ಮಾಹಿತಿಯನ್ನೂ ನೀಡಿದ್ದಾರೆ. ನೀವು ತರಕಾರಿ ರೆಡಿ ಮಾಡಿಸಿ, ನಾವು ಬ್ಯಾಂಕ್ ಖಾತೆಗೆ ಹಣ ಹಾಕುತ್ತೇವೆ ಎಂದಿದ್ದಾನೆ. ಅದರಂತೆ ವ್ಯಾಪಾರಿ ತರಕಾರಿಯನ್ನು ರೆಡಿ ಮಾಡಿ, ಬಿಲ್ ಕಳುಹಿಸಿದ್ದಾರೆ. ಬಿಲ್ ಪಾವತಿಗೆ ಸೇನಾಧಿಕಾರಿಯ ಸೋಗಿನ ವ್ಯಕ್ತಿ ಒಪ್ಪಿದ್ದು, ಅದಕ್ಕಾಗಿ ನೀವೊಂದು ಓಟಿಪಿ ನಂಬರ್ ನೀಡಬೇಕೆಂದು ಕೇಳಿದ್ದಾನೆ.

ಇದರಿಂದ ಸಂಶಯಗೊಂಡ ತರಕಾರಿ ವ್ಯಾಪಾರಿ ಸ್ಥಳೀಯರಾದ ಉಪ್ಪಿನಂಗಡಿ ಗ್ರಾಪಂ ಸದಸ್ಯರೊಬ್ಬರ ಬಳಿ ಈ ಬಗ್ಗೆ ಹೇಳಿದ್ದಾರೆ. ಯಾವುದೇ ಖಾತೆಗೆ ಹಣ ಹಾಕಲು ಓಟಿಪಿ ನಂಬರ್ ನೀಡುವ ಪದ್ಧತಿ ಇಲ್ಲವೆಂದು ಅವರು ಹೇಳಿದ್ದು, ಓಟಿಪಿ ನಂಬರ್ ನೀಡದಂತೆ ಸೂಚಿಸಿದ್ದಾರೆ. ಈ ರೀತಿಯಲ್ಲಿ ಬ್ಯಾಂಕ್ ಖಾತೆಯ ವಿವರ ಪಡೆದು ಓಟಿಪ್ ನಂಬರ್ ಕಳುಹಿಸಿ, ಖಾತೆಯಿಂದಲೇ ಹಣವನ್ನು ಲಪಟಾಯಿಸಲು ಯತ್ನಿಸುತ್ತಾರೆ ಎಂಬ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ಸೇನಾಧಿಕಾರಿ ಎಂದು ಹೇಳಿದರೆ ವಿಶೇಷ ಗೌರವ ಇದ್ದು, .ಜನರು ಕೂಡ ನಂಬುತ್ತಾರೆ ಎಂಬ ಹಿನ್ನೆಲೆಯಲ್ಲಿ ವಂಚಕರು ಹೊಸ ದಾರಿ ಕಂಡುಕೊಂಡಿದ್ದಾರೆ. ಸೇನಾಧಿಕಾರಿ ಹೆಸರಲ್ಲಿ ಕರೆ ಮಾಡಿ, ಯಾಮಾರಿಸಲು ಯತ್ನಿಸುತ್ತಿದ್ದಾರೆ.
An attempt to cheat a vegetable vendor was made by a person who claimed himself to be an army officer. At the time of bill payment, he obtained bank account details and then tried to cheat the person by trying to collect OTP number from him. This incident happened in Uppinangady in the taluk.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm