ಬ್ರೇಕಿಂಗ್ ನ್ಯೂಸ್
26-12-21 01:10 pm Mangalore Correspondent ಕ್ರೈಂ
ಮಂಗಳೂರು, ಡಿ.26 : ಕ್ರಿಸ್ತಿಯನ್ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ, ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ನೊಂದ ಹುಡುಗಿಯ ತಾಯಿ ಮಂಗಳೂರಿನ ವಿಶ್ವ ಹಿಂದು ಪರಿಷತ್ ಮುಖಂಡರಿಗೆ ರಕ್ಷಣೆಗೆ ಮನವಿ ಮಾಡಿದ್ದಾರೆ.
ಯುವತಿ ಮಂಗಳೂರಿನ ಬಿಜೈ ನಿವಾಸಿಯಾಗಿದ್ದು ಆಕೆಯನ್ನು ಕಾಟಿಪಳ್ಳದ ಕೃಷ್ಣಾಪುರ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತ ಕಳೆದ ಮೂರು ವರ್ಷಗಳಿಂದ ದುರುಪಯೋಗ ಮಾಡುತ್ತಿದ್ದಾನೆ ಎಂದು ದೂರಲಾಗಿದೆ. ಸಿದ್ದಿಕ್ ಮಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿದ್ದು ಹಲವಾರು ಕೇಸು ಎದುರಿಸುತ್ತಿದ್ದಾನೆ ಎನ್ನಲಾಗಿದೆ.
ಯುವತಿ ಅಲೋಶಿಯಸ್ ಕಾಲೇಜಿನಲ್ಲಿ ಕಾಲೇಜು ಮುಗಿಸಿದ್ದು ಅಲ್ಲಿಯೇ ಡ್ರಗ್ಸ್ ಚಟ ಹತ್ತಿಸಿಕೊಂಡಿದ್ದಳು. ಆನಂತರ ಡ್ರಗ್ಸ್ ಇಲ್ಲದೆ ಬದುಕುವುದೇ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಡ್ರಗ್ಸ್ ಚಟಕ್ಕೆ ಬಿದ್ದಿದ್ದಳು. ನಡುರಾತ್ರಿಯಲ್ಲಿ ಬೈಕಿನಲ್ಲಿ ಬರುವ ಯುವಕರು ಯುವತಿಯನ್ನು ಕರೆದೊಯ್ಯುತ್ತಿದ್ದು ಆಬಳಿಕ ಹಲವು ದಿನಗಳ ಕಾಲ ಇಟ್ಟುಕೊಳ್ಳುತ್ತಿದ್ದರು. ಮಗಳು ಎಲ್ಲಿದ್ದಾಳೆ ಎನ್ನುವುದು ತಿಳಿಯದೆ ಹೆತ್ತವರು ಆತಂಕಕ್ಕೆ ಒಳಗಾಗುತ್ತಿದ್ದರು. ಮಗಳ ಈ ರೀತಿಯ ನಡತೆಯಿಂದ ತೀವ್ರ ಬೇಸತ್ತಿದ್ದ ತಂದೆ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದರು.

ಯುವತಿ ತನ್ನನ್ನು ಸಿದ್ದಿಕ್ ಮದುವೆಯಾಗುವುದಾಗಿ ಹೇಳುತ್ತಿದ್ದು ಅದೇ ಭ್ರಮೆಯಲ್ಲಿ ಆತನ ಜೊತೆ ತಿರುಗಾಡುತ್ತಿದ್ದಾಳೆ. ಈ ಬಗ್ಗೆ ಯುವತಿಯ ತಾಯಿ ಕ್ರಿಸ್ತಿಯನ್ ಧರ್ಮಗುರುಗಳಿಗೂ ದೂರು ನೀಡಿದ್ದಾರೆ. ಅಲ್ಲದೆ, ಉರ್ವಾ ಠಾಣೆಯಲ್ಲಿ ದೂರನ್ನೂ ನೀಡಿದ್ದಾರೆ.
ಮಹಮ್ಮದ್ ಸಿದ್ದಿಕ್ ಈಗಾಗಲೇ ಎರಡು- ಮೂರು ಮದುವೆಯಾಗಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಮಂಗಳೂರು ಮತ್ತು ಕೊಡಗಿನಲ್ಲಿ ಡ್ರಗ್ಸ್ ಪೂರೈಸುತ್ತಿರುವ ವಹಿವಾಟು ನಡೆಸುತ್ತಿದ್ದಾನೆ ಎಂದು ವಿಶ್ವ ಹಿಂದು ಪರಿಷತ್ ನಾಯಕರು ಆರೋಪಿಸಿದ್ದಾರೆ. ಕೂಡಲೇ ಆರೋಪಿಯನ್ನು ಬಂಧಿಸಿ, ಡ್ರಗ್ಸ್ ಸೆಕ್ಸ್ ಜಿಹಾದಿಗೆ ಬಲಿಯಾಗಿರುವ ಯುವತಿಗೆ ನ್ಯಾಯ ಕೊಡಿಸಬೇಕೆಂದು ವಿಹಿಂಪ ನಾಯಕ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
Mangalore Christian girl cheated of Love and sex victims mother approaches VHP for help.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm