ಬ್ರೇಕಿಂಗ್ ನ್ಯೂಸ್
26-12-21 01:10 pm Mangalore Correspondent ಕ್ರೈಂ
ಮಂಗಳೂರು, ಡಿ.26 : ಕ್ರಿಸ್ತಿಯನ್ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ, ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ನೊಂದ ಹುಡುಗಿಯ ತಾಯಿ ಮಂಗಳೂರಿನ ವಿಶ್ವ ಹಿಂದು ಪರಿಷತ್ ಮುಖಂಡರಿಗೆ ರಕ್ಷಣೆಗೆ ಮನವಿ ಮಾಡಿದ್ದಾರೆ.
ಯುವತಿ ಮಂಗಳೂರಿನ ಬಿಜೈ ನಿವಾಸಿಯಾಗಿದ್ದು ಆಕೆಯನ್ನು ಕಾಟಿಪಳ್ಳದ ಕೃಷ್ಣಾಪುರ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತ ಕಳೆದ ಮೂರು ವರ್ಷಗಳಿಂದ ದುರುಪಯೋಗ ಮಾಡುತ್ತಿದ್ದಾನೆ ಎಂದು ದೂರಲಾಗಿದೆ. ಸಿದ್ದಿಕ್ ಮಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿದ್ದು ಹಲವಾರು ಕೇಸು ಎದುರಿಸುತ್ತಿದ್ದಾನೆ ಎನ್ನಲಾಗಿದೆ.
ಯುವತಿ ಅಲೋಶಿಯಸ್ ಕಾಲೇಜಿನಲ್ಲಿ ಕಾಲೇಜು ಮುಗಿಸಿದ್ದು ಅಲ್ಲಿಯೇ ಡ್ರಗ್ಸ್ ಚಟ ಹತ್ತಿಸಿಕೊಂಡಿದ್ದಳು. ಆನಂತರ ಡ್ರಗ್ಸ್ ಇಲ್ಲದೆ ಬದುಕುವುದೇ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಡ್ರಗ್ಸ್ ಚಟಕ್ಕೆ ಬಿದ್ದಿದ್ದಳು. ನಡುರಾತ್ರಿಯಲ್ಲಿ ಬೈಕಿನಲ್ಲಿ ಬರುವ ಯುವಕರು ಯುವತಿಯನ್ನು ಕರೆದೊಯ್ಯುತ್ತಿದ್ದು ಆಬಳಿಕ ಹಲವು ದಿನಗಳ ಕಾಲ ಇಟ್ಟುಕೊಳ್ಳುತ್ತಿದ್ದರು. ಮಗಳು ಎಲ್ಲಿದ್ದಾಳೆ ಎನ್ನುವುದು ತಿಳಿಯದೆ ಹೆತ್ತವರು ಆತಂಕಕ್ಕೆ ಒಳಗಾಗುತ್ತಿದ್ದರು. ಮಗಳ ಈ ರೀತಿಯ ನಡತೆಯಿಂದ ತೀವ್ರ ಬೇಸತ್ತಿದ್ದ ತಂದೆ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದರು.

ಯುವತಿ ತನ್ನನ್ನು ಸಿದ್ದಿಕ್ ಮದುವೆಯಾಗುವುದಾಗಿ ಹೇಳುತ್ತಿದ್ದು ಅದೇ ಭ್ರಮೆಯಲ್ಲಿ ಆತನ ಜೊತೆ ತಿರುಗಾಡುತ್ತಿದ್ದಾಳೆ. ಈ ಬಗ್ಗೆ ಯುವತಿಯ ತಾಯಿ ಕ್ರಿಸ್ತಿಯನ್ ಧರ್ಮಗುರುಗಳಿಗೂ ದೂರು ನೀಡಿದ್ದಾರೆ. ಅಲ್ಲದೆ, ಉರ್ವಾ ಠಾಣೆಯಲ್ಲಿ ದೂರನ್ನೂ ನೀಡಿದ್ದಾರೆ.
ಮಹಮ್ಮದ್ ಸಿದ್ದಿಕ್ ಈಗಾಗಲೇ ಎರಡು- ಮೂರು ಮದುವೆಯಾಗಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಮಂಗಳೂರು ಮತ್ತು ಕೊಡಗಿನಲ್ಲಿ ಡ್ರಗ್ಸ್ ಪೂರೈಸುತ್ತಿರುವ ವಹಿವಾಟು ನಡೆಸುತ್ತಿದ್ದಾನೆ ಎಂದು ವಿಶ್ವ ಹಿಂದು ಪರಿಷತ್ ನಾಯಕರು ಆರೋಪಿಸಿದ್ದಾರೆ. ಕೂಡಲೇ ಆರೋಪಿಯನ್ನು ಬಂಧಿಸಿ, ಡ್ರಗ್ಸ್ ಸೆಕ್ಸ್ ಜಿಹಾದಿಗೆ ಬಲಿಯಾಗಿರುವ ಯುವತಿಗೆ ನ್ಯಾಯ ಕೊಡಿಸಬೇಕೆಂದು ವಿಹಿಂಪ ನಾಯಕ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
Mangalore Christian girl cheated of Love and sex victims mother approaches VHP for help.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm