ಬ್ರೇಕಿಂಗ್ ನ್ಯೂಸ್
15-09-20 07:39 pm Headline Karnataka News Network ಕ್ರೈಂ
ಆಲಪ್ಪುಳ, ಸೆಪ್ಟೆಂಬರ್15: ಸೆಲ್ಫಿ ಹುಚ್ಚಿನಿಂದ ಏನೆಲ್ಲ ದುರಂತ ಎದುರಾದ್ರೂ ಜನರು ಎಚ್ಚತ್ತುಕೊಂಡಿಲ್ಲ. ಇಲ್ಲೊಬ್ಬಳು ತಾಯಿ, ಬೀಚ್ ನಲ್ಲಿ ನಿಂತು ಮಗುವಿನ ಜೊತೆ ಸೆಲ್ಫೀ ಕ್ಲಿಕ್ಕಿಸಲು ಹೋಗಿ ಮಗುವನ್ನೇ ಕಳಕೊಂಡಿದ್ದಾಳೆ. ತಾಯಿಯ ಸೆಲ್ಫೀ ಹುಚ್ಚಿನಿಂದಾಗಿ ಕೈನಲ್ಲಿ ಹಿಡಿದುಕೊಂಡಿದ್ದ ಎರಡು ವರ್ಷದ ಮಗು ಸಮುದ್ರಪಾಲಾದ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ.
ಭಾನುವಾರ ಸಂಜೆ ಘಟನೆ ನಡೆದಿದ್ದು ಪೊಲೀಸರು ಮತ್ತು ಸ್ಥಳೀಯರ ಹುಡುಕಾಟದ ಬಳಿಕ ಮಗುವಿನ ಶವ ಎರಡು ದಿನಗಳ ನಂತರ ಆಲಪ್ಪುಳದ ಗೆಲಿಲಿಯೋ ಬೀಚ್ ನಲ್ಲಿ ಪತ್ತೆಯಾಗಿದೆ. ಮೃತ ಮಗುವಿನ ಹೆಸರು ಅಧಿಕೃಷ್ಣ ಎಂದು ದಿ ಹಿಂದು ಪತ್ರಿಕೆ ವರದಿ ಮಾಡಿದೆ. ತಟರಕ್ಷಣಾ ಪಡೆ ಮತ್ತು ಸ್ಥಳೀಯ ಮೀನುಗಾರರು ಪತ್ತೆ ಕಾರ್ಯಾಚರಣೆ ನಡೆಸಿದ್ದರು.
ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ತನ್ನಿಬ್ಬರು ಮಕ್ಕಳು ಮತ್ತು ಸದರನ ಇನ್ನೊಂದು ಮಗುವಿನ ಜೊತೆ ಬೀಚ್ ನೋಡಲು ಬಂದಿದ್ದರು. ಸಮುದ್ರ ಅಬ್ಬರ ಹೆಚ್ಚಿದ್ದರಿಂದ ಅಲ್ಲಿನ ಸೆಕ್ಯುರಿಟಿ ಬೀಚ್ ಹೋಗದಂತೆ ತಡೆಯುತ್ತಿದ್ದ. ಆದರೆ ತಾಯಿ, ಮಕ್ಕಳು ಸೆಕ್ಯುರಿಟಿಯ ಕಣ್ಣು ತಪ್ಪಿಸಿ ಅಲ್ಲಿನ ಇಎಸ್ಐ ಆಸ್ಪತ್ರೆಯ ಎಡೆಯಿಂದ ನುಸುಳಿಕೊಂಡು ಬೀಚ್ ನತ್ತ ಬಂದಿದ್ದರು. ಬೀಚ್ ನಲ್ಲಿ ಮಕ್ಕಳ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಬೃಹತ್ ಅಲೆಯೊಂದು ಎದ್ದು ಬಂದಿದ್ದು ತಾಯಿ, ಮಕ್ಕಳು ಬ್ಯಾಲೆನ್ಸ್ ತಪ್ಪಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ದೂರದಲ್ಲಿ ನಿಂತಿದ್ದ ಸಂಬಂಧಿಕನೊಬ್ಬ ಓಡಿ ಬಂದು ಮಹಿಳೆ ಮತ್ತು ಆರು ಮತ್ತು ಏಳು ವರ್ಷದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಎರಡೂವರೆ ವರ್ಷದ ಮಗು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಒಂದು ಕ್ಷಣದ ಮೈಮರೆವು ಮಗುವನ್ನು ಬಲಿ ತೆಗೆದುಕೊಂಡಿತ್ತು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm