ಬ್ರೇಕಿಂಗ್ ನ್ಯೂಸ್
15-09-20 07:39 pm Headline Karnataka News Network ಕ್ರೈಂ
ಆಲಪ್ಪುಳ, ಸೆಪ್ಟೆಂಬರ್15: ಸೆಲ್ಫಿ ಹುಚ್ಚಿನಿಂದ ಏನೆಲ್ಲ ದುರಂತ ಎದುರಾದ್ರೂ ಜನರು ಎಚ್ಚತ್ತುಕೊಂಡಿಲ್ಲ. ಇಲ್ಲೊಬ್ಬಳು ತಾಯಿ, ಬೀಚ್ ನಲ್ಲಿ ನಿಂತು ಮಗುವಿನ ಜೊತೆ ಸೆಲ್ಫೀ ಕ್ಲಿಕ್ಕಿಸಲು ಹೋಗಿ ಮಗುವನ್ನೇ ಕಳಕೊಂಡಿದ್ದಾಳೆ. ತಾಯಿಯ ಸೆಲ್ಫೀ ಹುಚ್ಚಿನಿಂದಾಗಿ ಕೈನಲ್ಲಿ ಹಿಡಿದುಕೊಂಡಿದ್ದ ಎರಡು ವರ್ಷದ ಮಗು ಸಮುದ್ರಪಾಲಾದ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ.
ಭಾನುವಾರ ಸಂಜೆ ಘಟನೆ ನಡೆದಿದ್ದು ಪೊಲೀಸರು ಮತ್ತು ಸ್ಥಳೀಯರ ಹುಡುಕಾಟದ ಬಳಿಕ ಮಗುವಿನ ಶವ ಎರಡು ದಿನಗಳ ನಂತರ ಆಲಪ್ಪುಳದ ಗೆಲಿಲಿಯೋ ಬೀಚ್ ನಲ್ಲಿ ಪತ್ತೆಯಾಗಿದೆ. ಮೃತ ಮಗುವಿನ ಹೆಸರು ಅಧಿಕೃಷ್ಣ ಎಂದು ದಿ ಹಿಂದು ಪತ್ರಿಕೆ ವರದಿ ಮಾಡಿದೆ. ತಟರಕ್ಷಣಾ ಪಡೆ ಮತ್ತು ಸ್ಥಳೀಯ ಮೀನುಗಾರರು ಪತ್ತೆ ಕಾರ್ಯಾಚರಣೆ ನಡೆಸಿದ್ದರು.
ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ತನ್ನಿಬ್ಬರು ಮಕ್ಕಳು ಮತ್ತು ಸದರನ ಇನ್ನೊಂದು ಮಗುವಿನ ಜೊತೆ ಬೀಚ್ ನೋಡಲು ಬಂದಿದ್ದರು. ಸಮುದ್ರ ಅಬ್ಬರ ಹೆಚ್ಚಿದ್ದರಿಂದ ಅಲ್ಲಿನ ಸೆಕ್ಯುರಿಟಿ ಬೀಚ್ ಹೋಗದಂತೆ ತಡೆಯುತ್ತಿದ್ದ. ಆದರೆ ತಾಯಿ, ಮಕ್ಕಳು ಸೆಕ್ಯುರಿಟಿಯ ಕಣ್ಣು ತಪ್ಪಿಸಿ ಅಲ್ಲಿನ ಇಎಸ್ಐ ಆಸ್ಪತ್ರೆಯ ಎಡೆಯಿಂದ ನುಸುಳಿಕೊಂಡು ಬೀಚ್ ನತ್ತ ಬಂದಿದ್ದರು. ಬೀಚ್ ನಲ್ಲಿ ಮಕ್ಕಳ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಬೃಹತ್ ಅಲೆಯೊಂದು ಎದ್ದು ಬಂದಿದ್ದು ತಾಯಿ, ಮಕ್ಕಳು ಬ್ಯಾಲೆನ್ಸ್ ತಪ್ಪಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ದೂರದಲ್ಲಿ ನಿಂತಿದ್ದ ಸಂಬಂಧಿಕನೊಬ್ಬ ಓಡಿ ಬಂದು ಮಹಿಳೆ ಮತ್ತು ಆರು ಮತ್ತು ಏಳು ವರ್ಷದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಎರಡೂವರೆ ವರ್ಷದ ಮಗು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಒಂದು ಕ್ಷಣದ ಮೈಮರೆವು ಮಗುವನ್ನು ಬಲಿ ತೆಗೆದುಕೊಂಡಿತ್ತು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm