ಬ್ರೇಕಿಂಗ್ ನ್ಯೂಸ್
04-01-22 11:45 am HK Desk news ಕ್ರೈಂ
ಮುಂಬೈ, ಜ.4 : ಮುಸ್ಲಿಮ್ ಮಹಿಳೆಯರನ್ನು ಹರಾಜಿಗಿಟ್ಟ ಬುಲ್ಲಿ ಬಾಯ್ ಏಪ್ ಪ್ರಕರಣದಲ್ಲಿ ಮುಂಬೈ ಸೈಬರ್ ಪೊಲೀಸರು ಶಂಕಿತ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬುಲ್ಲಿ ಬಾಯ್ ಏಪ್ ಫಾಲೋ ಮಾಡುತ್ತಿದ್ದ ಐವರಲ್ಲಿ ಈತನೂ ಒಬ್ಬನಾಗಿದ್ದು, ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಮುಂಬೈಗೆ ಒಯ್ದಿದ್ದಾರೆ.
ನಾಲ್ಕು ದಿನಗಳ ಹಿಂದೆ ದೆಹಲಿಯಲ್ಲಿ ಬುಲ್ಲಿ ಬಾಯ್ ಏಪ್ ಪ್ರಕರಣ ಮೊದಲು ಬೆಳಕಿಗೆ ಬಂದಿತ್ತು. ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಿಂದ ಕದ್ದು ಅದನ್ನು ಬುಲ್ಲಿ ಬಾಯ್ ಏಪ್ ನಲ್ಲಿ ಅಪ್ಲೋಡ್ ಮಾಡಿ ಹರಾಜಿಗಿಡಲಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ದೇಶಾದ್ಯಂತ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ದೆಹಲಿ ಮತ್ತು ಮುಂಬೈ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, ತನಿಖೆ ಕೈಗೆತ್ತಿಕೊಂಡಿದ್ದರು.
ಈ ಬಗ್ಗೆ ದೆಹಲಿ ಪೊಲೀಸರು ಗಿಟ್ ಹಬ್ ಡೆವಲಪರ್ ಮತ್ತು ಟ್ವಿಟರ್ ಇಂಡಿಯಾ ಬಳಿಯಿಂದ ಮಾಹಿತಿ ಕೇಳಿತ್ತು. ಗಿಟ್ ಹಬ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬುಲ್ಲಿ ಬಾಯ್ ಏಪ್ ಅನ್ನು ವಿಷಯ ತಿಳಿಯುತ್ತಲೇ ಬ್ಲಾಕ್ ಮಾಡಲಾಗಿದೆ. ಅಲ್ಲದೆ ಹಿಂಸೆಯನ್ನು ಪ್ರಚೋದಿಸುವ, ಕಿರುಕುಳ, ತಾರತಮ್ಯ ಹರಡುವ ರೀತಿ ಯಾವುದೇ ಕಂಟೆಂಟ್ ಇರದಂತೆ ಕಂಪನಿಯಿಂದ ಪ್ರತ್ಯೇಕ ನೀತಿಯನ್ನು ಹೊಂದಲಾಗಿದೆ ಎಂದು ಹೇಳಿದೆ.
ಸೋಶಿಯಲ್ ಮೀಡಿಯಾ ಸಾಫ್ಟ್ ವೇರ್ ಡೆವಲಪರ್ ಸಂಸ್ಥೆಯಾಗಿರುವ ಗಿಟ್ ಹಬ್, ಭಾರತೀಯ ಕಾನೂನಿನಡಿ ಪ್ರಕರಣದಲ್ಲಿ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದೆ. ಇದೇ ವೇಳೆ, ಬುಲ್ಲಿ ಬಾಯ್ ಏಪ್ ಬಗ್ಗೆ ಮೊದಲು ಟ್ವೀಟ್ ಮಾಡಿರುವವರು, ಫಾಲೋ ಮಾಡುತ್ತಿರುವವರ ಬಗ್ಗೆ ಟ್ವಿಟರ್ ಸಂಸ್ಥೆಯಿಂದ ಮಾಹಿತಿ ಕೇಳಿದೆ.
ಮುಸ್ಲಿಂ ಮಹಿಳೆಯರ ಹರಾಜು ; ಬುಲ್ಲಿ ಬಾಯ್ ಬಗ್ಗೆ ಟ್ವಿಟರ್ ಬಳಿ ಮಾಹಿತಿ ಕೇಳಿದ ದೆಹಲಿ ಪೊಲೀಸರು
ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಸಾರ್ವಜನಿಕ ಹರಾಜಿಗಿಟ್ಟ GitHub ; ದೆಹಲಿಯಲ್ಲಿ ಕಿಡಿ ಎಬ್ಬಿಸಿದ ಸೋಶಿಯಲ್ ಮೀಡಿಯಾ !
Mumbai police detained a suspect accused in Bulli Bai app case from Bengaluru. He is being taken to Mumbai. He is one of the five followers of Bulli Bai. He is likely to be arrested.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm