ಬ್ರೇಕಿಂಗ್ ನ್ಯೂಸ್
04-01-22 12:45 pm HK Desk news ಕ್ರೈಂ
ಥಾಣೆ, ಜ.3 : ಮನೆಯಲ್ಲಿ 50 ರೂಪಾಯಿ ಕದ್ದಿದ್ದಕ್ಕೆ ಮಗನನ್ನು ಸಾಯುವ ಮಟ್ಟಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ತಂದೆಯನ್ನು ಕಲ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್(10) ತಂದೆಯ ಹೊಡೆತಕ್ಕೆ ಸಾವನ್ನಪ್ಪಿರುವ ಬಾಲಕ. ಬಬ್ಲು ಓಮ್ಪ್ರಕಾಶ್ ಪ್ರಜಾಪತಿ(41) ಕೊಲೆ ಮಾಡಿರುವ ಆರೋಪಿ.
ಕಲ್ವಾ ಠಾಣೆಯ ವ್ಯಾಪ್ತಿ ಥಕುರ್ಪದ ಕೊಳೆಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಡಿ.29ರಂದು ರಾತ್ರಿ ಕಿರಣ್ನನ್ನು ತಂದೆ ಥಳಿಸಿದಾಗ ಆತನ ಏಟಿಗೆ ಮಗ ರಾತ್ರಿಯೆಲ್ಲ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬಳಿಕ ಜೈ ಮಾ ಸಂತೋಷಿ ಚಾವಲ್ನ ಗೈಯ್ಕರ್ ಮೈದಾನ್ನಲ್ಲಿ ಬ್ಲಾಂಕೆಟ್ನಿಂದ ಸುತ್ತಿದ್ದ ಹಲವು ಗಾಯಗಳ ಗುರುತುಗಳಿದ್ದ ಬಾಲಕನನ್ನು ಕಂಡ ದಾರಿಹೋಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಕಾಲ್ವ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೂಡಲೇ ಆತನನ್ನು ಚತ್ರಪತಿ ಶಿವಾಜಿ ಮಹಾರಾಜ್ ಹಾಸ್ಪಟೆಲ್ಗೆ ಕರೆದೊಯ್ದಾಗ ಆತ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದು, ಬಾಲಕನ ಭುಜ ಮತ್ತು ಕಾಲಿಗೆ ಮುರಿತವಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವುದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ತನಿಖೆ ಕೈಗೊಂಡ ಪೊಲೀಸರು ನೆರೆಹೊರೆಯವರನ್ನು ವಿಚಾರಿಸಿದಾಗ ಬಾಲಕನ ವಿವರಗಳು ಪತ್ತೆಯಾಗಿವೆ. ಬಳಿಕ ಮೃತ ಬಾಲಕನ ಸಹೋದರಿಯಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.
ಮಗನನ್ನು ಕೊಂದು ಪರಾರಿಯಾಗಿದ್ದ ತಂದೆ ಓಂಪ್ರಕಾಶ್ ಬಳಿಕ ತನ್ನ ಏರಿಯಾದಲ್ಲಿ ತಿರುಗಾಡುತ್ತಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Kalwa police arrested a 38-year-old man on Thursday for beating his 10-year-old son to death for stealing ₹50 from his wallet. The father beat him up with different objects on Wednesday night and the boy fell unconscious. The father later wrapped him in a blanket and left him unattended till the next day.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am