ಬ್ರೇಕಿಂಗ್ ನ್ಯೂಸ್
13-01-22 08:02 pm HK Desk news ಕ್ರೈಂ
ಬೆಳ್ತಂಗಡಿ, ಜ.13 : ಜಮೀನು ವಿಚಾರದಲ್ಲಿ ತಕರಾರು ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು ನೆರೆಮನೆಯ ವ್ಯಕ್ತಿಯೊಬ್ಬ ಯುವಕನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ಧರ್ಮಸ್ಥಳ ಠಾಣೆ ವ್ಯಾಪ್ತಿಯ ರೆಖ್ಯ ಗ್ರಾಮದ ದೇವಸ ಎಂಬಲ್ಲಿ ನಡೆದಿದೆ.
ರೆಖ್ಯ ಗ್ರಾಮದ ನಿವಾಸಿ ಸಾಂತಪ್ಪ ಗೌಡ (42) ಮೃತ ವ್ಯಕ್ತಿ. ಸಾಂತಪ್ಪ ಗೌಡ ಎಲ್ಲೈಸಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಮನೆ ಬಳಿಯ ಮಣ್ಣಿನ ರಸ್ತೆ ಬದಿಯಲ್ಲಿ ನೆರೆಮನೆಯ ಜಯಚಂದ್ರ ಮತ್ತು ಇತರ ಕೆಲಸದಾಳುಗಳು ಕೆಲಸ ಮಾಡುತ್ತಿದ್ದರು.

ರಸ್ತೆಯ ಇಕ್ಕೆಲಗಳನ್ನು ಸವರಿ ಸರಿಪಡಿಸುತ್ತಿದ್ದಾಗ ಅದನ್ನು ನೋಡಿದ ಸಾಂತಪ್ಪ ಗೌಡ ಆಕ್ಷೇಪಿಸಿದ್ದಾರೆ. ರಸ್ತೆಯ ಭಾಗದಲ್ಲಿ ಹುಲ್ಲು ಸವರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದು, ಇದೇ ವಿಚಾರದಲ್ಲಿ ಜಯಚಂದ್ರ ಮತ್ತು ಸಾಂತಪ್ಪ ಗೌಡರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ, ಜಯಚಂದ್ರ ತನ್ನ ಕೈಯಲ್ಲಿದ್ದ ಕತ್ತಿಯಿಂದ ಏಕಾಏಕಿ ಸಾಂತಪ್ಪ ಗೌಡನ ಕುತ್ತಿಗೆ ಮತ್ತು ತಲೆಗೆ ಕಡಿದಿದ್ದು ಆತ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಇದೇ ವೇಳೆ, ಸಾಂತಪ್ಪ ಗೌಡನ ಅಕ್ಕ ಮೀನಾಕ್ಷಿ ಮತ್ತು ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಜೋಸೆಫ್ ಓಡಿ ಬಂದಿದ್ದು, ಅಷ್ಟರಲ್ಲಿ ಜಯಚಂದ್ರ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಮೀನಾಕ್ಷಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Belthangady Murder LIC agent hacked to death by neighbour over land dispute. The deceased has been identified as Santappa Gowda.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm