ಬ್ರೇಕಿಂಗ್ ನ್ಯೂಸ್
17-01-22 03:26 pm Shivamogga Correspondent ಕ್ರೈಂ
ಶಿವಮೊಗ್ಗ, ಜ.17: ಪತ್ನಿಯದ್ದೇ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿದ್ದಲ್ಲದೆ, ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಪತಿ ಮತ್ತು ಅತ್ತೆ, ಮಾವನ ವಿರುದ್ಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆತ್ತಲೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟು ಮಾನ ಹರಾಜು ಹಾಕುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಲ್ಲದೆ, ತಂದೆಯ ಬಳಿಯಿಂದ ಹಣ ಕೇಳಿ ತರುವಂತೆ ಒತ್ತಡ ಹೇರುತ್ತಿದ್ದ ಬಗ್ಗೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಸಲ್ಮಾನ್, ಅತ್ತೆ ಸಾಹಿರಾ, ಮಾವ ಶೌಕತ್ ಖಾನ್, ನಾದಿನಿ ಸಮೀನಾ ವಿರುದ್ಧ ದೂರು ನೀಡಿದ್ದು, ಶಿವಮೊಗ್ಗದ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ರಿಪ್ಪನ್ ಪೇಟೆ ಠಾಣೆ ವ್ಯಾಪ್ತಿಯ ಹುಂಚ ನಿವಾಸಿಯಾಗಿದ್ದು, 2021ರ ಮೇ 22ರಂದು ಈಕೆಯನ್ನು ಶೃಂಗೇರಿಯ ಸಲ್ಮಾನ್ ಜೊತೆ ಮದುವೆ ಮಾಡಲಾಗಿತ್ತು. ಮದುವೆಯ ಸಂದರ್ಭ 90 ಗ್ರಾಮ್ ಚಿನ್ನಾಭರಣ ಮತ್ತು ಮೂರು ಲಕ್ಷ ನಗದು ವರದಕ್ಷಿಣೆ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಮದುವೆಯ ನಂತರ 90 ಗ್ರಾಮ್ ಚಿನ್ನಾಭರಣ, ಎರಡು ಲಕ್ಷ ನಗದು ಮತ್ತು ಮನೆಯ ಇನ್ನಿತರ ಸಾಮಾನುಗಳನ್ನು ಖರೀದಿಸಿ ಕೊಡಲಾಗಿತ್ತು.
ಒಂದು ಲಕ್ಷ ನಗದು ಕೊಡಲು ಬಾಕಿಯಾಗಿದ್ದ ವಿಚಾರದಲ್ಲಿ ಇವರ ನಡುವೆ ಜಗಳ ನಡೆದಿದ್ದು, ಪದೇ ಪದೇ ಯುವತಿಗೆ ಕಿರುಕುಳ ನೀಡಲಾಗಿತ್ತು. ಇದಕ್ಕಾಗಿ ಅತ್ತೆ ಮತ್ತು ಮಾವ ನಿರಂತರ ಕಿರುಕುಳ ನೀಡಿದ್ದು, ಇದಕ್ಕೆ ಗಂಡ ಸಲ್ಮಾನ್ ಮತ್ತು ನಾದಿನಿ ಸಮೀನಾ ಸಾಥ್ ನೀಡಿದ್ದರು. ಇದಲ್ಲದೆ, ಗಂಡ ಸಲ್ಮಾನ್ ಈಕೆಯನ್ನು ಬೆತ್ತಲಾಗಿಸಿ ವಿಡಿಯೋ ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಲಾರಂಭಿಸಿದ್ದ. ಒಂದೋ ಹಣ ತಂದು ಕೊಡಬೇಕು, ಇಲ್ಲದಿದ್ದರೆ ವಿಡಿಯೋ ಹೊರಬಿಟ್ಟು ನಡತೆ ಸರಿ ಇಲ್ಲ ಎಂದು ಸುದ್ದಿ ಹಬ್ಬಿಸುತ್ತೇನೆ ಎಂದು ಬೆದರಿಸಿದ್ದ.
ಗಂಡ ಮತ್ತು ಅತ್ತೆ, ಮಾವಂದಿರ ಕಿರುಕುಳದಿಂದ ಬೇಸತ್ತ ಯುವತಿ ಇತ್ತೀಚೆಗೆ ತನ್ನ ರಿಪ್ಪನ್ ಪೇಟೆ ಬಳಿಯ ತವರು ಮನೆಗೆ ಬಂದಿದ್ದಳು. ಅಲ್ಲಿಗೆ ಬಂದಿದ್ದ ಸಲ್ಮಾನ್, ತಲಾಖ್ ನೀಡುವುದಾಗಿ ಹೇಳಿ ಹೋಗಿದ್ದ. ಆನಂತರ ಫೋನ್ ಮಾಡಿ, ವಿಡಿಯೋ ತನ್ನಲ್ಲಿದೆ, ಅದನ್ನು ಹರಿಯಬಿಡುತ್ತೇನೆ ಎಂದು ಹೇಳಿದ್ದ. ಅಲ್ಲದೆ, ಉಳಿದ ಹಣವನ್ನು ಕೂಡಲೇ ತಂದು ಕೊಡು, ಇಲ್ಲದಿದ್ದರೆ ಕೊಂದು ಹಾಕುತ್ತೇನೆ ಎಂದು ಬೆದರಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Shivamogga Husband booked for blackmailing, uploading wifes nude video for dowry. A case has been registered at Ripponpet police station.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm