ಬ್ರೇಕಿಂಗ್ ನ್ಯೂಸ್
17-01-22 03:26 pm Shivamogga Correspondent ಕ್ರೈಂ
ಶಿವಮೊಗ್ಗ, ಜ.17: ಪತ್ನಿಯದ್ದೇ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿದ್ದಲ್ಲದೆ, ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಪತಿ ಮತ್ತು ಅತ್ತೆ, ಮಾವನ ವಿರುದ್ಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆತ್ತಲೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟು ಮಾನ ಹರಾಜು ಹಾಕುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಲ್ಲದೆ, ತಂದೆಯ ಬಳಿಯಿಂದ ಹಣ ಕೇಳಿ ತರುವಂತೆ ಒತ್ತಡ ಹೇರುತ್ತಿದ್ದ ಬಗ್ಗೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಸಲ್ಮಾನ್, ಅತ್ತೆ ಸಾಹಿರಾ, ಮಾವ ಶೌಕತ್ ಖಾನ್, ನಾದಿನಿ ಸಮೀನಾ ವಿರುದ್ಧ ದೂರು ನೀಡಿದ್ದು, ಶಿವಮೊಗ್ಗದ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ರಿಪ್ಪನ್ ಪೇಟೆ ಠಾಣೆ ವ್ಯಾಪ್ತಿಯ ಹುಂಚ ನಿವಾಸಿಯಾಗಿದ್ದು, 2021ರ ಮೇ 22ರಂದು ಈಕೆಯನ್ನು ಶೃಂಗೇರಿಯ ಸಲ್ಮಾನ್ ಜೊತೆ ಮದುವೆ ಮಾಡಲಾಗಿತ್ತು. ಮದುವೆಯ ಸಂದರ್ಭ 90 ಗ್ರಾಮ್ ಚಿನ್ನಾಭರಣ ಮತ್ತು ಮೂರು ಲಕ್ಷ ನಗದು ವರದಕ್ಷಿಣೆ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಮದುವೆಯ ನಂತರ 90 ಗ್ರಾಮ್ ಚಿನ್ನಾಭರಣ, ಎರಡು ಲಕ್ಷ ನಗದು ಮತ್ತು ಮನೆಯ ಇನ್ನಿತರ ಸಾಮಾನುಗಳನ್ನು ಖರೀದಿಸಿ ಕೊಡಲಾಗಿತ್ತು.
ಒಂದು ಲಕ್ಷ ನಗದು ಕೊಡಲು ಬಾಕಿಯಾಗಿದ್ದ ವಿಚಾರದಲ್ಲಿ ಇವರ ನಡುವೆ ಜಗಳ ನಡೆದಿದ್ದು, ಪದೇ ಪದೇ ಯುವತಿಗೆ ಕಿರುಕುಳ ನೀಡಲಾಗಿತ್ತು. ಇದಕ್ಕಾಗಿ ಅತ್ತೆ ಮತ್ತು ಮಾವ ನಿರಂತರ ಕಿರುಕುಳ ನೀಡಿದ್ದು, ಇದಕ್ಕೆ ಗಂಡ ಸಲ್ಮಾನ್ ಮತ್ತು ನಾದಿನಿ ಸಮೀನಾ ಸಾಥ್ ನೀಡಿದ್ದರು. ಇದಲ್ಲದೆ, ಗಂಡ ಸಲ್ಮಾನ್ ಈಕೆಯನ್ನು ಬೆತ್ತಲಾಗಿಸಿ ವಿಡಿಯೋ ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಲಾರಂಭಿಸಿದ್ದ. ಒಂದೋ ಹಣ ತಂದು ಕೊಡಬೇಕು, ಇಲ್ಲದಿದ್ದರೆ ವಿಡಿಯೋ ಹೊರಬಿಟ್ಟು ನಡತೆ ಸರಿ ಇಲ್ಲ ಎಂದು ಸುದ್ದಿ ಹಬ್ಬಿಸುತ್ತೇನೆ ಎಂದು ಬೆದರಿಸಿದ್ದ.
ಗಂಡ ಮತ್ತು ಅತ್ತೆ, ಮಾವಂದಿರ ಕಿರುಕುಳದಿಂದ ಬೇಸತ್ತ ಯುವತಿ ಇತ್ತೀಚೆಗೆ ತನ್ನ ರಿಪ್ಪನ್ ಪೇಟೆ ಬಳಿಯ ತವರು ಮನೆಗೆ ಬಂದಿದ್ದಳು. ಅಲ್ಲಿಗೆ ಬಂದಿದ್ದ ಸಲ್ಮಾನ್, ತಲಾಖ್ ನೀಡುವುದಾಗಿ ಹೇಳಿ ಹೋಗಿದ್ದ. ಆನಂತರ ಫೋನ್ ಮಾಡಿ, ವಿಡಿಯೋ ತನ್ನಲ್ಲಿದೆ, ಅದನ್ನು ಹರಿಯಬಿಡುತ್ತೇನೆ ಎಂದು ಹೇಳಿದ್ದ. ಅಲ್ಲದೆ, ಉಳಿದ ಹಣವನ್ನು ಕೂಡಲೇ ತಂದು ಕೊಡು, ಇಲ್ಲದಿದ್ದರೆ ಕೊಂದು ಹಾಕುತ್ತೇನೆ ಎಂದು ಬೆದರಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Shivamogga Husband booked for blackmailing, uploading wifes nude video for dowry. A case has been registered at Ripponpet police station.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm