ಬ್ರೇಕಿಂಗ್ ನ್ಯೂಸ್
17-01-22 10:35 pm HK News Desk ಕ್ರೈಂ
ಹೈದರಾಬಾದ್, ಜ.17: ಪತ್ನಿ ಪರ ಪುರುಷರ ಜೊತೆಗಿದ್ದ ಅಶ್ಲೀಲ ವಿಡಿಯೋ ನೋಡಿದ ವ್ಯಕ್ತಿಯೊಬ್ಬ ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ವಂಗಲಪುಡಿ ಗ್ರಾಮದಲ್ಲಿ ನಡೆದಿದೆ.
ವಂಗಲಪುಡಿ ಗ್ರಾಮದ 35 ವರ್ಷದ ವಿವಾಹಿತ ಮಹಿಳೆ ಉದ್ಯೋಗಕ್ಕಾಗಿ ಕುವೈತ್ ತೆರಳಿದ್ದು ಗಂಡ ಮತ್ತು ಮಕ್ಕಳನ್ನು ಊರಲ್ಲಿ ಬಿಟ್ಟಿದ್ದರು. ಗೋಕಾವರಂನಲ್ಲಿ ಇಬ್ಬರು ಗಂಡು ಮಕ್ಕಳು (13, 10 ವರ್ಷ) ಮತ್ತು ಒಬ್ಬ ಮಗಳು (12) ಅಜ್ಜಿಯ ಮನೆಯಲ್ಲಿ ವಾಸವಿದ್ದರು. ಆಟೋ ರಿಕ್ಷಾ ಓಡಿಸುತ್ತಿದ್ದ ತಂದೆ ಕೆಲವೊಮ್ಮೆ ಅಲ್ಲಿಗೆ ಹೋಗಿ ಮಕ್ಕಳನ್ನು ನೋಡಿಕೊಂಡು ತೆರಳುತ್ತಿದ್ದ.
ಶನಿವಾರ ಸಂಜೆ ಮಕ್ಕಳ ಬಳಿ ಬಂದಿದ್ದ ತಂದೆ, ಅವರನ್ನು ಹೊರಗೆ ಕರೆದೊಯ್ಯುವುದಾಗಿ ಹೇಳಿ ಹೋಗಿದ್ದ. ತೋಟಕ್ಕೆ ಕರೆದೊಯ್ದು ಇಲಿಗೆ ಹಾಕುವ ವಿಷವನ್ನು ತಾನೇ ಸೇವಿಸಿದ್ದು ಬಳಿಕ ತನ್ನ ಮೂವರು ಮಕ್ಕಳಿಗೆ ವಿಷ ನೀಡಲು ಯತ್ನಿಸಿದ್ದಾನೆ.
ಹತ್ತು ವರ್ಷದ ಮಗ ವಿಷ ಸೇವಿಸಿದ್ದರೆ, ಇನ್ನಿಬ್ಬರು ಮಕ್ಕಳು ವಿಷ ಸೇವಿಸಲಿಲ್ಲ. ಅಷ್ಟರಲ್ಲಿ ತಂದೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು ಮಕ್ಕಳಿಬ್ಬರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅಸ್ವಸ್ಥಗೊಂಡಿದ್ದ ತಂದೆ, ಮಗನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ
ನನಗೆ ಹತ್ತಿರದ ಸಂಬಂಧಿಯಿಂದ ನನ್ನ ಪತ್ನಿ ಪರ ಪುರುಷರ ಜೊತೆಗಿರುವ ಅಶ್ಲೀಲ ವಿಡಿಯೋ ಸಿಕ್ಕಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆದರೆ, ಆತ ಹೇಳುತ್ತಿರುವ ವಿಡಿಯೋಗಳನ್ನು ಪರಿಶೀಲಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷ ಸೇವಿಸಲು ಒತ್ತಾಯಿಸಿದ್ದ ತಂದೆ
‘ನಮ್ಮ ತಂದೆ ನಮ್ಮ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅಜ್ಜಿಯ ಮನೆಯಲ್ಲಿಯೇ ಇದ್ದು ಓದುತ್ತಿದ್ದೇವೆ. ಅವರು ಆಗಾಗ ಬಂದು ಹೋಗುತ್ತಿದ್ದರು. ಹಬ್ಬದ ಹಿನ್ನೆಲೆ ತಂದೆ ನಮ್ಮ ಬಳಿಗೆ ಬಂದಿದ್ದರು. ಹೀಗಾಗಿ ನಾವು ಅವರ ಜೊತೆ ಹೊರಗೆ ಹೋಗಿದ್ದೆವು. ಕಹಿ ಔಷಧಿ ಕುಡಿಯಲು ಹೇಳಿದ್ದರು. ವಿಷವೆಂದು ಸಂಶಯ ಬಂದು ಕುಡಿದಿರಲಿಲ್ಲ’ ಎಂದು ಇನ್ನಿಬ್ಬರು ಮಕ್ಕಳು ಹೇಳಿದ್ದಾರೆ.
Wife Sex video with other man leaked, husband attempts for suicide by killing two children in hyderabad.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm