ಬ್ರೇಕಿಂಗ್ ನ್ಯೂಸ್
18-01-22 09:21 pm HK Desk news ಕ್ರೈಂ
ಬೆಂಗಳೂರು, ಜ.18 : ಬಿಎಸ್ಸಿ ವಿದ್ಯಾರ್ಥಿಯೊಬ್ಬ ಇನ್ ಸ್ಟಾ ಗ್ರಾಮಿನಲ್ಲಿ ಯುವತಿ ಹೆಸರಲ್ಲಿ ಖಾತೆ ತೆರೆದು ತನ್ನನ್ನು ಸಲಿಂಗ ಕಾಮಿಯೆಂದು ಹೇಳಿಕೊಂಡಿದ್ದಲ್ಲದೆ ಸ್ನೇಹಿತೆಯರನ್ನು ಸಂಪಾದಿಸಿ, ಬಳಿಕ ಅವರನ್ನೇ ಬ್ಲಾಕ್ಮೇಲ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಫ್ರೇಸರ್ ಟೌನ್ ನಿವಾಸಿಯಾಗಿರುವ ಪ್ರಪಂಚ್ ನಾಚಪ್ಪ ಎಂಬ 21 ವರ್ಷದ ಯುವಕ, ಕಳೆದ ಸೆಪ್ಟಂಬರ್ ತಿಂಗಳಲ್ಲಿ ಪ್ರತೀಕ್ಷಾ ಬೋರಾ ಹೆಸರಲ್ಲಿ ಇನ್ ಸ್ಟಾ ಗ್ರಾಮಿನಲ್ಲಿ ಖಾತೆ ತೆರೆದಿದ್ದ. ತಾನೊಬ್ಬ ಸಲಿಂಗ ಕಾಮಿ ಯುವತಿಯಾಗಿದ್ದು, ಸೂಕ್ತ ಸಂಗಾತಿಗಾಗಿ ಹುಡುಕಾಟ ನಡೆಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದ.
ಆನಂತರ ಕೆಲವು ಯುವತಿಯರ ಸ್ನೇಹ ಸಂಪಾದಿಸಿದ್ದು ಸೆಕ್ಸ್ ಚಾಟಿಂಗ್ ನಡೆಸಿದ್ದಾನೆ. ಈ ವೇಳೆ, ಯುವತಿಯರ ನಗ್ನ ಚಿತ್ರವನ್ನು ಕೇಳಿ ಪಡೆದಿದ್ದು, ಆ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಆರಂಭಿಸಿದ್ದಾನೆ. ಹಣಕ್ಕಾಗಿ ಪೀಡಿಸಿದ್ದು, ಹಣ ಕೊಡದೇ ಇದ್ದರೆ ಫೋಟೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾನೆ. ಅಲ್ಲದೆ, ತನ್ನನ್ನು ಮಾಡೆಲ್ ಎಂದು ಹೇಳಿಕೊಂಡಿದ್ದು ನೀವು ಮಾಡೆಲ್ ಆಗುವುದಿದ್ದರೆ ಚಾನ್ಸ್ ಕೊಡಿಸುತ್ತೀನಿ ಎಂದು ಆಸೆ ತೋರಿಸಿದ್ದ. 30ರಿಂದ 40 ಮಂದಿಗೆ ಈ ರೀತಿ ಬ್ಲಾಕ್ಮೇಲ್ ಮಾಡಿದ್ದು ಕೆಲವು ಲಕ್ಷ ರೂಪಾಯಿ ದೋಚಿದ್ದಾನೆ.
ತನ್ನನ್ನು ಸಲಿಂಗಕಾಮಿ ಎಂದು ಹೇಳಿಕೊಂಡು ಮರುಳು ಮಾಡುತ್ತಿದ್ದ. ತನ್ನದೇ ನಗ್ನ ಚಿತ್ರವೆಂದು ಹೇಳಿ ಯಾವುದೋ ಫೋಟೋ ಕಳಿಸುತ್ತಿದ್ದ. ಆಮೂಲಕ ನಿನ್ನ ಚಿತ್ರ ಕಳಿಸುವಂತೆ ಪೀಡಿಸುತ್ತಿದ್ದ. ಪ್ರತಿ ಫೋಟೋಗೆ 4 ಸಾವಿರ ರೂ. ಕೊಡುತ್ತೇನೆಂದು ಹೇಳಿ ಆಮಿಷವೊಡ್ಡಿ ಫೋಟೋ ಪಡೆಯುತ್ತಿದ್ದ. ಆನಂತರ, ನಮ್ಮನ್ನೇ ಬ್ಲಾಕ್ಮೇಲ್ ಮಾಡುತ್ತಿದ್ದ ಎಂದು ಯುವತಿಯೊಬ್ಬಳು ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಿದ್ದಾಳೆ. ಈ ಬಗ್ಗೆ ದೂರು ಪಡೆದ ಪೊಲೀಸರು ಇನ್ ಸ್ಟಾ ಗ್ರಾಮ್ ಹಿನ್ನೆಲೆಯನ್ನು ಕೆದಕಿ ನೋಡಿದಾಗ ಬಿಎಸ್ಸಿ ವಿದ್ಯಾರ್ಥಿ ನಾಚಪ್ಪನ ನಿಜಬಣ್ಣ ಬಯಲಾಗಿತ್ತು.
ಸಂತ್ರಸ್ತ ಯುವತಿಯರು ಆತ ಹಣಕ್ಕಾಗಿ ಬ್ಲಾಕ್ಮೇಲ್ ಮಾಡಲು ಶುರು ಮಾಡಿದರೆ, ಆತನ ಖಾತೆಯನ್ನು ಬ್ಲಾಕ್ ಮಾಡುತ್ತಿದ್ದರು. ಆದರೆ ಆತ ಬೇರೊಂದು ಖಾತೆ ತೆರೆದು ಸಂಪರ್ಕಕ್ಕೆ ಬಂದು ಮತ್ತೆ ಬ್ಲಾಕ್ಮೇಲ್ ಮಾಡುತ್ತಿದ್ದ. ಹಣ ಕೊಡದೇ ಇದ್ದರೆ ಫೋಟೋವನ್ನು ಷೇರ್ ಮಾಡುತ್ತೇನೆಂದು ಬೆದರಿಸುತ್ತಿದ್ದ. ಪ್ರತಿ ಯುವತಿಯಿಂದ ಕನಿಷ್ಠ 5ರಿಂದ ಹತ್ತು ಸಾವಿರ ರೂ. ಹಣ ಪಡೆಯುತ್ತಿದ್ದ. ಕಾಲೇಜು ಯುವತಿಯರನ್ನೇ ಟಾರ್ಗೆಟ್ ಮಾಡಿ, ತನ್ನ ಜಾಲ ಬೀಸುತ್ತಿದ್ದ. ಬಲೆಗೆ ಬೀಳುತ್ತಿದ್ದ ಯುವತಿಯರನ್ನು ಹಣಕ್ಕಾಗಿ ಪೀಡಿಸುತ್ತಿದ್ದ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ.
21-year-old Nachappa used a fake Instagram account and pretended to be a lesbian. He would win the confidence of girls and ask them to share nude pictures. He then blackmailed them, threatening to upload the pictures.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm