ಬ್ರೇಕಿಂಗ್ ನ್ಯೂಸ್
19-01-22 03:51 pm HK Desk news ಕ್ರೈಂ
ಢಾಕಾ, ಜ.19 : ನಾಪತ್ತೆಯಾದ ಎರಡು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದ ಬಾಂಗ್ಲಾದೇಶದ ಖ್ಯಾತ ಸಿನಿಮಾ ನಟಿ ರೈಮಾ ಇಸ್ಲಾಮ್ ಶಿಮು(45) ಪ್ರಕರಣದಲ್ಲಿ ಸ್ಫೋಟಕ ತಿರುವು ಲಭಿಸಿದ್ದು, ಆಕೆಯನ್ನು ಗಂಡನೇ ಕೊಲೆ ಮಾಡಿದ್ದಾನೆ ಎನ್ನುವ ಮಾಹಿತಿ ಲಭಿಸಿದೆ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆಗೈದ ವಿಚಾರವನ್ನು ಹೇಳಿಕೊಂಡಿದ್ದಾನೆ.
ಜನವರಿ 17ರಂದು ಬೆಳಗ್ಗೆ ನಟಿ ರೈಮಾ ಇಸ್ಲಾಮ್ ಶಿಮು ಶವ ಢಾಕಾ ನಗರದ ಕಿರಾಣಿಗಂಜ್ ಏರಿಯಾದಲ್ಲಿ ರಸ್ತೆ ಬದಿಯ ಮೋರಿಯೊಂದರಲ್ಲಿ ಪತ್ತೆಯಾಗಿತ್ತು. ಗೋಣಿ ಚೀಲದಲ್ಲಿ ಕಟ್ಟಿ ಎಸೆಯಲಾಗಿದ್ದ ಶವವನ್ನು ಸ್ಥಳೀಯರು ಗುರುತಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಶವವನ್ನು ಪೋಸ್ಟ್ ಮಾರ್ಟಂ ನಡೆಸಲು ರವಾನಿಸಲಾಗಿತ್ತು. ಇದಕ್ಕೂ ಮುನ್ನ ಭಾನುವಾರ ಬೆಳಗ್ಗೆ ಶಿಮು ಗಂಡ ಶೆಖಾವತ್ ಆಲಿ ನೋಬಲ್, ತನ್ನ ಪತ್ನಿ ನಾಪತ್ತೆಯಾಗಿದ್ದಾಗಿ ಪೊಲೀಸ್ ದೂರು ನೀಡಿದ್ದ.
ನಟಿಯ ಶವ ಪತ್ತೆಯಾದ ಬೆನ್ನಲ್ಲೇ ಪೊಲೀಸರು ಆಕೆಯ ಪತಿ ಶೆಖಾವತ್ ಮತ್ತು ಆತನ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದರು. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಟಿಯನ್ನು ಶೆಖಾವತ್ ಸೂಚನೆಯಂತೆ ದುಷ್ಕರ್ಮಿಗಳ ತಂಡ, ಕೊಲೆಗೈದು ಕಿರಾಣಿಗಂಜ್ ಏರಿಯಾದ ಮೋರಿಯೊಂದರಲ್ಲಿ ಎಸೆದಿದೆ ಎನ್ನಲಾಗುತ್ತಿದೆ. ಕೊಲೆ ಕೃತ್ಯದ ಬಗ್ಗೆ ಗಂಡ ಒಪ್ಪಿಕೊಂಡಿದ್ದು, ಯಾಕಾಗಿ ಈ ಕೃತ್ಯ ನಡೆಸಿದ್ದಾನೆ ಎನ್ನುವುದು ಇನ್ನೂ ದೃಢಪಟ್ಟಿಲ್ಲ. ಹೀಗಾಗಿ ನಟಿಯ ಕೊಲೆ ಪ್ರಕರಣ ಸಂಬಂಧಿಸಿ ಹೆಚ್ಚಿನ ತನಿಖೆ ನಡೆಸುವಂತೆ ಆಕೆಯ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಶವದ ಮೇಲೆ ಗಾಯದ ಗುರುತುಗಳಿದ್ದುದರಿಂದ ಕೊಲೆ ಎನ್ನುವ ಶಂಕೆ ವ್ಯಕ್ತವಾಗಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕುವುದಕ್ಕಾಗಿ ಗಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಕೆಲವು ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದ ಕೆಲವು ನಟರು ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ. 1998ರಲ್ಲಿ ಸಿನಿಮಾ ರಂಗ ಪ್ರವೇಶಿಸಿದ್ದ ರೈಮಾ ಶಿಮು ಬಾಂಗ್ಲಾದಲ್ಲಿ ಹೆಸರಾಂತ ನಟಿಯಾಗಿದ್ದು 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಅಲ್ಲದೆ, ಟಿವಿ ಸೀರಿಯಲ್, ನಾಟಕಗಳ ನಿರ್ಮಾಣದಲ್ಲಿಯೂ ತೊಡಗಿಸಿದ್ದರು. ಬಾಂಗ್ಲಾದೇಶ ಸಿನಿಮಾ ಕಲಾವಿದರ ಸಂಘದ ಗೌರವ ಸದಸ್ಯೆಯೂ ಆಗಿದ್ದರು.
In a shocking turn of events, Bangladeshi actress Raima Islam Shimu was found dead in a sack. She went missing a few days back and her dead body was found in a sack near a bridge in Keraniganj, Dhaka, on Monday (January 17, 2022). Her husband, Shakhawat Ali Nobel, was interrogated by the police after they found injury marks on the late actress' body. Nobel has confessed to murdering his wife Raima.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm