ಬ್ರೇಕಿಂಗ್ ನ್ಯೂಸ್
20-01-22 08:22 pm HK Desk news ಕ್ರೈಂ
ಆಗ್ರಾ, ಜ.20 : ಟ್ಯೂಷನ್ ಕ್ಲಾಸಿಗೆ ಹೋಗುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ತಮಗೆ ವಿಷ್ ಮಾಡಿಲ್ಲ ಎಂದು ಜೊತೆಗಿದ್ದ ಗೆಳೆಯರೇ ಸೇರಿ ಆತನಿಗೆ ಹಲ್ಲೆಗೈದು ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಜನವರಿ 18ರಂದು ಸಂಜೆ ಘಟನೆ ನಡೆದಿದ್ದು, ಹತ್ತನೇ ಕ್ಲಾಸ್ ವಿದ್ಯಾರ್ಥಿ ನಡೆದುಕೊಂಡು ಹೋಗುತ್ತಿದ್ದಾಗ ಪರಿಚಯದ ಗೆಳೆಯರು ಎದುರಾಗಿದ್ದರು. ಈ ವೇಳೆ, ಮಾತಿಗೆ ಮಾತು ಬೆಳೆದಿದ್ದು 12ನೇ ಕ್ಲಾಸ್ ಓದುತ್ತಿದ್ದ ಇಬ್ಬರು ಸೇರಿ ದಲಿತ ಹುಡುಗನಿಗೆ ಹಲ್ಲೆ ನಡೆಸಿದ್ದಾರೆ. ಆನಂತರ, ಅದರಲ್ಲಿ ಒಬ್ಬಾತ ತನ್ನಲ್ಲಿದ್ದ ಕಂಟ್ರಿಮೇಡ್ ಪಿಸ್ತೂಲನ್ನು ತಂದು ಹುಡುಗನ ಕಾಲಿಗೆ ಗುಂಡು ಹಾರಿಸಿದ್ದಾನೆ.
ಹುಡುಗ ನೆಲಕ್ಕೆ ಬಿದ್ದು ಚೀರಾಡುತ್ತಲೇ ಇಬ್ಬರು ಕೂಡ ಪರಾರಿಯಾಗಿದ್ದಾರೆ. ಸ್ಥಳೀಯರು ಸೇರಿ ಹುಡುಗನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿ ಯುವಕರಿಬ್ಬರು 18 ವರ್ಷ ಮೇಲ್ಪಟ್ಟವರಾಗಿದ್ದು, 12ನೇ ತರಗತಿ ಓದುತ್ತಿದ್ದರು. ಅದರಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮತ್ತು ಗುಂಡೇಟು ಪಡೆದ ಸಂತ್ರಸ್ತ ಯುವಕ ಒಂದೇ ಏರಿಯಾದ ನಿವಾಸಿಗಳು. ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿ ಕೊಲೆಯತ್ನ ಮತ್ತು ದಲಿತ ನಿಂದನೆಯ ಅಟ್ರಾಸಿಟಿ ಕೇಸ್ ಹಾಕಲಾಗಿದೆ.
ಗುಂಡೇಟು ಪಡೆದ ಹುಡುಗ ಅಪಾಯದಿಂದ ಪಾರಾಗಿದ್ದಾನೆ ಎಂದು ನ್ಯೂ ಆಗ್ರಾ ಪೊಲೀಸ್ ಠಾಣೆಯ ಎಸ್ಎಚ್ಓ ಅರವಿಂದ ನರ್ವಾಲ್ ಹೇಳಿದ್ದಾರೆ. ಬಂಧಿತ ಆರೋಪಿ ಯುವಕ ಈ ಹಿಂದೆಯೂ ಇದೇ ರೀತಿ ಕೊಲೆಯತ್ನ ಕೃತ್ಯ ನಡೆಸಿದ್ದು, ಜೈಲು ಪಾಲಾಗಿದ್ದ. ಆನಂತರ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಎಂದು ನರ್ವಾಲ್ ತಿಳಿಸಿದ್ದಾರೆ.
A Dalit boy studying in class X suffered bullet injuries in his left leg after he was allegedly shot at by his friends for not greeting them while he was on his way to attend tuition classes on Tuesday afternoon in Agra. Police said the accused boys are adults and one of them has been arrested while the other is on the run. The victim is out of danger.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm