ಬ್ರೇಕಿಂಗ್ ನ್ಯೂಸ್
21-01-22 11:00 pm Mangalore Correspondent ಕ್ರೈಂ
ಮಂಗಳೂರು, ಜ.21 : ನಗರದ ಕುದ್ರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಆಕೆಯ ಗಂಡ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾನೆ.
ಅಸ್ಸಾಮ್ ಮೂಲದ ಸ್ವಹೀದುಲ್ ಅಸ್ಲಾಮ್ ಲಷ್ಕರ್ (30) ಎಂಬ ಯುವಕ ಮತ್ತು ಆತನ ಪತ್ನಿ ಎನ್ನಲಾದ ಸೂಫಿಯಾ ಬೇಗಂ ಆರು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದು, ಕುದ್ರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸ್ವಹೀದುಲ್ ಮಂಗಳೂರಿನಲ್ಲಿ ಪೈಂಟಿಂಗ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.
ಶುಕ್ರವಾರ ಮುಂಜಾನೆ ನಾಲ್ಕು ಗಂಟೆಗೆ ಎದ್ದು ಅಡುಗೆ ಕೆಲಸ ಮಾಡಿ ಮಲಗಿದ್ದು, ಬೆಳಗ್ಗೆ 7.45ಕ್ಕೆ ಎದ್ದು ನೋಡಿದಾಗ ಸೂಫಿಯಾ ಬೇಗಂ ತನ್ನ ಮಲಗಿದ ಕೋಣೆಯಲ್ಲಿ ಕಿಟಕಿಯ ಸರಳಿಗೆ ಚೂಡಿದಾರದ ಶಾಲು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಳಿಕ ಆಕೆಯನ್ನು ಶಾಲಿನಿಂದ ಬಿಡಿಸಿ ನೆಲದಲ್ಲಿ ಮಲಗಿಸಿದ್ದೇನೆ. ನೆರೆಹೊರೆಯವರಿಗೆ ಈ ಬಗ್ಗೆ ತಿಳಿಸಿದ್ದು ಸೂಫಿಯಾ ಮೃತಪಟ್ಟಿದ್ದು ಕಂಡುಬಂದಿರುತ್ತದೆ ಎಂದು ದೂರಿನಲ್ಲಿ ಲಷ್ಕರ್ ಹೇಳಿದ್ದಾನೆ.
ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಕೂಡ ಅಸ್ಸಾಂ ಮೂಲದ ನಿವಾಸಿಗಳಾಗಿದ್ದು ಪೊಲೀಸರು ಲಷ್ಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯುವತಿಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಅವರು ಮಂಗಳೂರಿಗೆ ಬರುತ್ತಿದ್ದಾರೆ ಅನ್ನುವ ಮಾಹಿತಿಯಿದೆ. ಆಕೆಯ ಹೆತ್ತವರ ಮಾಹಿತಿ ಪ್ರಕಾರ, ಯುವತಿಗೆ 17 ವರ್ಷ ಆಗಿದ್ದು, ಹತ್ತನೇ ಕ್ಲಾಸ್ ಓದುತ್ತಿರುವಾಗಲೇ ಆಕೆಯನ್ನು ಪ್ರೀತಿಸಿ ಅಲ್ಲಿಂದ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಈಗ ಯಾವುದೋ ವಿಚಾರದಲ್ಲಿ ಕಲಹ ಏರ್ಪಟ್ಟು ಹುಡುಗಿ ಸಾವಿಗೆ ಶರಣಾಗಿದ್ದಾಳೆಯೇ ಅಥವಾ ಈತನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆಯೇ ಎಂಬ ಶಂಕೆಯಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ.
A painter has filed a complaint with the Bunder police that his wife committed suicide on Friday, January 21. According to the complaint, the deceased Sufia Begam was living with the painter Shohidul in a rented house in Kudroli for the past five months. Sufia Begam was a homemaker.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm