ಬ್ರೇಕಿಂಗ್ ನ್ಯೂಸ್
25-01-22 09:42 pm HK Desk news ಕ್ರೈಂ
ಹಾಸನ, ಜ 25 : ತರಬೇತಿ ನಿರತ ವೈದ್ಯೆಗೆ ಲಿಫ್ಟ್ನಲ್ಲಿ ಬಲವಂತವಾಗಿ ಮುತ್ತುಕೊಟ್ಟು ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಹಿಮ್ಸ್ ಆಸ್ಪತ್ರೆಯ ವೈದ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಪಕ ಡಾ. ಲೋಕೇಶ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಡಾ.ಲೋಕೇಶ್ ಅವರನ್ನ ಅಮಾನತು ಮಾಡಲಾಗಿದೆ.
ಜ.12ರಂದು ಲಿಫ್ಟ್ನಲ್ಲಿ ತೆರಳುತ್ತಿದ್ದ ತರಬೇತಿ ನಿರತ ವೈದ್ಯೆಗೆ ಡಾ.ಲೋಕೇಶ್ ಏಕಾಏಕಿ ಮುತ್ತು ಕೊಟ್ಟಿದ್ದಾಗಿ ಸಂತ್ರಸ್ತೆಯು ಹಾಸನ ವೈದ್ಯಕೀಯ ಸಂಸ್ಥೆಗೆ ಜ.14ರಂದು ದೂರು ನೀಡಿದ್ದರು. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಿ ಮೂರು ವಾರದೊಳಗೆ ವರದಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಆರೋಪವನ್ನು ತಳ್ಳಿ ಹಾಕಿರುವ ವೈದ್ಯ ಡಾ.ಲೋಕೇಶ್, ತನಿಖೆ ನಡೆಯುತ್ತಿದೆ. ನಾನು ನಿರಪರಾಧಿ ಅಂತ ಸಾಬೀತಾಗುತ್ತೆ. ನಾನು ಬೈದೆ ಅಂತ ಎಚ್ಒಡಿ ಜತೆ ಸೇರಿ ಇಲ್ಲಸಲ್ಲದ ಕತೆ ಕಟ್ಟಿದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಈ ಪ್ರಕರಣದ ತನಿಖಾಧಿಕಾರಿಯೂ ಆದ ಅಪರ ಜಿಲ್ಲಾಧಿಕಾರಿ ಕವಿತಾರಾಜಾರಾಂ ಮಾತನಾಡಿ, ಪಿಜಿ ವೈದ್ಯೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಡಾ.ಲೋಕೇಶ್ ಎಂಬುವವರ ವಿರುದ್ಧ ದೂರು ಬಂದಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅವರು ಲೋಕೇಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಆಂತರಿಕ ದೂರು ಮಹಿಳಾ ಸಮಿತಿಯಲ್ಲೂ ತನಿಖೆ ನಡೆಯುತ್ತೆ. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಿದ್ದಾರೆ. ಮೂರು ವಾರದೊಳಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದಾರೆ. ತನಿಖೆ ನಡೆಸಿ ವರದಿ ಸಲ್ಲಿಸುತ್ತೇವೆ ಎಂದರು.
Associate Professor attached to the Hassan Institute of Medical Sciences (HIMS) was on Tuesday suspended after a junior doctor accused him of sexual harassment in Karnataka’s Hassan district. The victim junior doctor has been under training after completion of the MBBS course. She has alleged in her complaint to HIMS that while going in a lift, the accused senior doctor had suddenly kissed her. Following the complaint, the accused doctor working in the Medicine department has been suspended.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm